ಮೈಸೂರು, ಜೂ. 05: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸಿಆರ್ಪಿಎಫ್ ಯೋಧ ಮೃತಪಟ್ಟಿರುವ ಘಟನೆ ಹುಣಸೂರು-ಪಿರಿಯಾಪಟ್ಟಣ ಹೆದ್ದಾರಿಯ ಅರಸು ಕಲ್ಲಹಳ್ಳಿ ಬಳಿ ನಡೆದಿದೆ.
ಶುಕ್ರವಾರ ರಾತ್ರಿ ಈ ಅನಾಹುತ ಸಂಭವಿಸಿದ್ದು, ಮೂಲತಃ ಪಿರಿಯಾಪಟ್ಟಣ ತಾಲ್ಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಅವರ ಪುತ್ರ ಅಣ್ಣಯ್ಯ ಶೆಟ್ಟಿ (35) ಮೃತಪಟ್ಟ ಯೋಧ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಇವರು ಮಹಾರಾಷ್ಟ್ರದ ನಕ್ಸಲ್ ಏರಿಯಾದ ಗಡ್ಸರ್ನಲ್ಲಿ 14 ವರ್ಷಗಳಿಂದ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು.
ರಜೆ ಮೇಲೆ ಊರಿಗೆ ಬಂದಿದ್ದ ಇವರು ಮೈಸೂರಿನಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಕಾರಿನಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ತಾಲ್ಲೂಕಿನ ಕಲ್ಲಹಳ್ಳಿ ಗೇಟ್ನ ಹತ್ತಿರದಲ್ಲಿ ಬ್ರೇಕ್ ವಿಫಲಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟರು.