• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಂಗ್ರೆಸನ್ನು ತೊಳೆದು ಅರಬ್ಬಿ ಸಮುದ್ರಕ್ಕೆ ಎಸೆಯಿರಿ, ರಾಜ್ಯದಲ್ಲಿ ಒಂದೂ ಸೀಟು ಗೆಲ್ಲಿಸಬೇಡಿ : ಸಿ.ಟಿ ರವಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಕಾಂಗ್ರೆಸನ್ನು ತೊಳೆದು ಅರಬ್ಬಿ ಸಮುದ್ರಕ್ಕೆ ಎಸೆಯಿರಿ, ರಾಜ್ಯದಲ್ಲಿ ಒಂದೂ ಸೀಟು ಗೆಲ್ಲಿಸಬೇಡಿ : ಸಿ.ಟಿ ರವಿ
0
SHARES
31
VIEWS
Share on FacebookShare on Twitter

Chikkamaglur : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊಳೆದು ಅರಬ್ಬಿ ಸಮುದ್ರಕ್ಕೆ ಎಸೆದು ಬಿಡಿ. ರಾಜ್ಯದ ಒಂದೂ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಡಿ, ಆಗ ರಾಜಕಾರಣ ಸ್ವಚ್ಛವಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಿ.ಟಿ ರವಿ(CT Ravi controversy statement) ಅವರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದು ಹೇಳಿದ್ದಾರೆ.

CT Ravi controversy statement

ಈ ಕುರಿತು ಚಿಕ್ಕಮಗಳೂರಿನಲ್ಲಿ (Chikmagaluru)ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊಳೆದು ಅರಬ್ಬಿ ಸಮುದ್ರಕ್ಕೆ ಎಸೆಯಿರಿ.

ಕರ್ನಾಟಕ ಬಿಜೆಪಿಗೆ, ಪ್ರಧಾನಿ ಮೋದಿ(Narendra Modi) ಅವರಿಗೆ ಕೊಡುವ ಮೆಜಾರಿಟಿ ಕೊಡಿ, ಸ್ಪಷ್ಟ ಬಹುಮತ ನೀಡಿದರೆ ಈಗ ಇರುವ ಸಣ್ಣ-ಪುಟ್ಟ ದೋಷಗಳು ದೂರವಾಗುತ್ತದೆ.

ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಯಾವುದೇ ಒಂದು ಕ್ಷೇತ್ರದಲ್ಲೂ ಗೆಲ್ಲಲು ಅವಕಾಶ ಕೊಡಬೇಡಿ. ಆಗ ರಾಜಕಾರಣ ಸ್ವಚ್ಛವಾಗುತ್ತದೆ ಎಂದು ಸಿ.ಟಿ ರವಿ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಮಾತ್ರ ಹಿಯಾಳಿಸದ ಸಿ.ಟಿ ರವಿ ಅವರು, ಅಧಿಕಾರಕ್ಕಾಗಿ ಎಲ್ಲಿ ಬೇಕಾದರೂ ಹೋಗುವ ಸಿದ್ಧಾಂತವಿಲ್ಲದ ಜೆಡಿಎಸ್‍(JDS) ಪಕ್ಷಕ್ಕೂ ಮತ ಹಾಕಬೇಡಿ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008-2018 ನೇ ವರ್ಷದಲ್ಲೂ ಬಹುಮತ ಇರಲಿಲ್ಲ, ಸೇರಿಸಿಕೊಂಡು ಸರ್ಕಾರ ಮಾಡಬೇಕಾಯ್ತು.

ಅಂತಹ ಪರಿಸ್ಥಿತಿ ಮತ್ತೊಮ್ಮೆ ಬರಬಾರದು ಎಂದರೇ ಜನ ಸ್ಪಷ್ಟ ಬಹುಮತ ನೀಡಬೇಕು. ಜೆಡಿಎಸ್ ಬಿಜೆಪಿ ಟೀಂ ಎಂದು ಹೇಳಿದ ಕಾಂಗ್ರೆಸ್ ಪಕ್ಷ 2018 ರಲ್ಲಿ ಮಾಡಿದ್ದೇನು?

ಸರ್ಕಾರ ಹಾಗೂ ಸಂಸತ್ತಿನ ಚುನಾವಣೆಯನ್ನು ಅವರ ಜೊತೆಯೇ ಸೇರಿ ಮಾಡಿದ್ದರು ಎಂದು ಹೇಳುವ ಮುಖೇನ ಸಿದ್ದರಾಮಯ್ಯ(Siddaramaiah) ಅವರಿಗೆ ತಿರುಗೇಟು ನೀಡಿದರು.

karnata state

ನನ್ನ ಅವಧಿಯಲ್ಲಿ ಅವ್ಯವಹಾರ ನಡೆದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ. ರವಿ (CT Ravi controversy statement) ಅವರು, ನಿಮಗೆ ನೀವೇ ಸತ್ಯಹರಿಶ್ಚಂದ್ರ ಎಂದು ಎಂದಿಗೂ ಸರ್ಟಿಫಿಕೇಟ್ ಕೊಟ್ಟುಕೊಳ್ಳಲಾಗದು.

ಹಾಗಾದರೆ ರಿಡ್ಯೂ ಅಂದರೇನು ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಿ. ಹಾಸಿಗೆ-ದಿಂಬು ವಿಷಯದಲ್ಲಿ ಹಣ ತಿಂದು ಕೇಸ್ ದಾಖಲಾಗಿದ್ದು ಮರೆತು ಹೋಯಿತೇ? ಸ್ಯಾಂಡ್ ಸ್ಕ್ಯಾಮ್ ನಲ್ಲಿ(Sand scam) ಯಾರು ಭಾಗಿಯಾಗಿದ್ದರು ಎಂದು ಬಿಡಿಸಿ ಹೇಳಬೇಕೆ ಎಂದು ತಿರುಗೇಟು ನೀಡಿದರು.

ಸದ್ಯ ವಿಧಾನಸಭಾ ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್(Congress) ಮತ್ತು ರಾಜ್ಯ ಬಿಜೆಪಿ(BJP) ನಡುವೆ ಮಾತಿನ ಸಮರ ಬಿರುಸಾಗಿ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಸಿ.ಟಿ ರವಿ ಅವರ ನಡುವೆ ಏಕವಚನದ ಆರೋಪಗಳು ತೀವ್ರ ಬುಗಿಲೆದ್ದಿವೆ.

ಸಿ.ಟಿ ರವಿ ಅವರು ಪ್ರತಿಬಾರಿಯೂ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಉಲ್ಲೇಖಿಸಿ ಹೇಳುವುದನ್ನು ಖಂಡಿಸಿರುವ ಸಿದ್ದರಾಮಯ್ಯ ಅವರು, ನನಗೆ ಸಿದ್ರಾಮುಲ್ಲಾಖಾನ್ ಎಂದು ಕರೆಯಲು ಅವನ್ಯಾರು? ನಮ್ಮ ಅಪ್ಪ ನನಗೆ ಸಿದ್ದರಾಮಯ್ಯ ಎಂದು ಹೆಸರಿಟ್ಟರು! ಇವನು ಯಾರು ನನಗೆ ಹೆಸರಿಡಲು ಎಂದು ಹೇಳುವ ಮೂಲಕ ಸಿ.ಟಿ ರವಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Tags: ctravipoliticalSiddaramaiah

Related News

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ
ಪ್ರಮುಖ ಸುದ್ದಿ

KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ

April 21, 2026
ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ

April 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.