Chikkamaglur: ಲಿಂಗಾಯತ ಸಮುದಾಯದ ಕುರಿತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ(C.T.Ravi) ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿರುವ(ct ravi slams congress) ನಡುವೆ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸಿಟಿ ರವಿ ಅವರು, ನಾನು ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ.
ಲಿಂಗಾಯುತ ಸಮುದಾಯದ ಬಗ್ಗೆ ನಾನು ಅವಹೇಳನಾಕಾರಿ ಹೇಳಿಕೆ ನೀಡಿದ್ದೇನೆ ಎಂದು ಕಾಂಗ್ರೆಸ್ (Congresss) ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು,
ಅದು ಕಾಂಗ್ರೆಸ್ಸಿನ ಸುಳ್ಳಿನ ಫ್ಯಾಕ್ಟರಿಯಿಂದ ಬಂದ ಫೇಕ್ ನ್ಯೂಸ್, ಕಾಂಗ್ರೆಸ್ಸಿಗರೇ ಹಬ್ಬಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಂತರ ತಮ್ಮ ನಿವಾಸದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು,
ನನ್ನನ್ನು ಲಿಂಗಾಯತ ಸಮುದಾಯದ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಹಿಂದಿನಿಂದಲೂ ನಡೆಯುತ್ತಿದೆ.
ಇದು ಅದರ ಮುಂದುವರೆದ ಭಾಗವಷ್ಟೇ, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ನನ್ನ ವಿರುದ್ದ ಲಿಂಗಾಯತ ಸಮುದಾಯದ ವಿರೋಧಿ ಭಾವನೆ (ct ravi slams congress) ಹುಟ್ಟು ಹಾಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ನಾನು ಲಿಂಗಾಯತ ಸಮುದಾಯದ ಕುರಿತು ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹೀಗಾಗಿ ಕ್ಷಮೆಯಾಚನೆ ಮಾಡುವ ಪ್ರಮೇಯವೇ ಬರುವುದಿಲ್ಲ.
ನಾನು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಇಂತಹ ಪ್ರಯತ್ನವನ್ನು ಕಾಂಗ್ರೆಸ್ (Congress) ಪಕ್ಷದವರು ಹಿಂದೆಯೂ ಮಾಡಿ ವಿಫಲರಾಗಿದ್ದಾರೆ.
ಈಗಲೂ ಮಾಡುತ್ತಿದ್ದಾರೆ. ಈಗಲೂ ವಿಫಲರಾಗುತ್ತಾರೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

ಚಿಕ್ಕಮಗಳೂರಿನ ಜನತೆ ನನ್ನನ್ನು ಜಾತಿ ಮೀರಿ ಮತ ಹಾಕಿ ಗೆಲ್ಲಿಸಿದ್ದಾರೆ. ನನ್ನನ್ನ ಎಲ್ಲಾ ಜಾತಿಯ ಜನ ಮತ ನೀಡಿ ಗೆಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯವರು ನನ್ನನ್ನ ಜಾತಿ ಮೀರಿ ನಾಲ್ಕು ಬಾರಿ ಗೆಲ್ಲಿಸಿ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೂರಿಸಿದ್ದಾರೆ.
ನನ್ನ ವಿರುದ್ದ ಲಿಂಗಾಯತ ಅಭ್ಯರ್ಥಿ ಇದ್ದಾಗಲೂ ನನ್ನ ಕ್ಷೇತ್ರದ ಲಿಂಗಾಯತರು ನನಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ. ಲಿಂಗಾಯತ ಸಮುದಾಯದ ಆ ಋಣ ತೀರಿಸೋದಕ್ಕೆ ಆಗಲ್ಲ.
ಹೀಗಿರುವಾಗ ನಾನೇಕೆ ಲಿಂಗಾಯುತ ಸಮುದಾಯದ ವಿರುದ್ದ ಮಾತನಾಡಲಿ. ಜಾತಿ ಹೆಸರಿನಲ್ಲಿ ನನ್ನ ವಿರುದ್ದ ಷಡ್ಯಂತ್ರ ನಡೆಸುತ್ತಿದ್ದಾರೆ. ಹೀಗಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲಾಗಿದೆ.
ನಾನು ನೀಡಿರುವ ಹೇಳಿಕೆ ಬೆಂಗಳೂರು ಸುದ್ದಿ ಅನ್ನುತ್ತಾರೆ. ನಾನು ಕಳೆದ 11 ದಿನಗಳಿಂದ ಬೆಂಗಳೂರಿಗೆ ಹೋಗೇ ಇಲ್ಲ. ರಾಜ್ಯ ಪ್ರವಾಸದಲ್ಲಿ ಇದ್ದೇನೆ. ಎಲ್ಲಿ ಹೇಳಿಕೆ ನೀಡಿದ್ದೇನೆ ಎಂದು ಪ್ರಶ್ನಿಸಿದ್ದಾರೆ.