Chennai: ಕಳೆದೆರಡು ದಿನಗಳಿಂದ ಅಬ್ಬರಿಸಿದ ಫೆಂಗಲ್ ಚಂಡಮಾರುತ (Cyclone Fengal) ಕ್ಷೀಣಿಸಿದ್ದರೂ ಕೂಡ ಸಂಪೂರ್ಣ ನಿರ್ಗಮಿಸದ ಪರಿಣಾಮ ತಮಿಳುನಾಡಿನ (Tamil Nadu) ಹಲವೆಡೆ ಸೋಮವಾರವೂ ಭಾರಿ ಮಳೆಯಾಗಿದ್ದು, ತಿರುವಣ್ಣಾಮಲೈ ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು (Thiruvannamalai Villupuram, Krishnagiri and Dharmapuri Districts) ಭಾರೀ ಪ್ರವಾಹದಿಂದಾಗಿ ತತ್ತರಿಸಿವೆ. ಶ್ರೀಕ್ಷೇತ್ರ ತಿರುವಣ್ಣಾಮಲೈನಲ್ಲಿ (Srikshetra in Thiruvannamalai) ಭೂಕುಸಿತ ಸಂಭವಿಸಿ 7 ಜನ ಬಲಿಯಾಗಿದ್ದು, 3 ದಿನದಲ್ಲಿ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 14ಕ್ಕೇರಿದೆ.

ಈಗಾಗಲೇ ಹಲವಾರು ಕಡೆಗಳಲ್ಲಿ ಬಸ್, ಕಾರ್ ಗಳು (Buses, cars) ಕೊಚ್ಚಿಕೊಂಡು ಹೋಗಿದ್ದು ಹಲವೆಡೆ ರೈಲುಗಳ ಸಂಚಾರ ರದ್ದುಗೊಂಡಿದ್ದು,(Trains have been canceled.) ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಅವರು ಸೋಮವಾರ ವಿಲ್ಲುಪುರಂನಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದ್ದು, ಸಂತ್ರಸ್ತರ ಸಂಕಷ್ಟ ಆಲಿಸಿ ಪರಿಹಾರ ವಸ್ತುಗಳನ್ನು ವಿತರಿಸಿದ್ದಾರೆ.
ವಿಲ್ಲುಪುರಂನಲ್ಲಿ (Villupuram) ಕಂಡು ಕೇಳರಿಯದ ಮಳೆ, 30 ವರ್ಷದ ಗರಿಷ್ಠ ಪ್ರವಾಹದ ಕಾರಣಕ್ಕೆ ನೂರಾರು ಮಂದಿ ಸಂತ್ರಸ್ತರಾಗಿದ್ದು, ಅವರಿಗೆ ಕಾಳಜಿ ಕೇಂದ್ರಗಳಲ್ಲಿ (Care centers) ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ಇನ್ನು ವಿಲ್ಲುಪುರಂ ಜಿಲ್ಲೆ ಮೂಲಕ ಸಂಚರಿಸುವ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಚೆನ್ನೈ-ತಿರುಚಿನಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲೂ (Chennai-Tiruchirappalli National Highway) ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ