• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ : ವಾಣಿಜ್ಯ ಗ್ಯಾಸ್ ಅಭಾವದಿಂದ ಸಂಕಷ್ಟದಲ್ಲಿರುವ ಹೋಟೆಲ್ ಉದ್ಯಮ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ : ವಾಣಿಜ್ಯ ಗ್ಯಾಸ್ ಅಭಾವದಿಂದ ಸಂಕಷ್ಟದಲ್ಲಿರುವ ಹೋಟೆಲ್ ಉದ್ಯಮ
0
SHARES
13
VIEWS
Share on FacebookShare on Twitter

ವಾಣಿಜ್ಯ ಗ್ಯಾಸ್ ಅಭಾವ: ದುಪ್ಪಟ್ಟು (Cylinders sold at high price) ದರಕ್ಕೆ ಸಿಲಿಂಡರ್ ಮಾರಾಟ

1,700 ರೂ. ಸಿಲಿಂಡರ್ 3,600 ರೂ.ಗೆ ಏರಿಕೆ; ಸಂಕಷ್ಟದಲ್ಲಿ ಹೋಟೆಲ್ ಮಾಲೀಕರು

ಗ್ಯಾಸ್ ಅಭಾವದಿಂದ ಆಹಾರ ದರ ಏರಿಕೆ ಭೀತಿ

Bengaluru: ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಅಭಾವ ದಿನದಿಂದ ದಿನಕ್ಕೆ ಗಂಭೀರ (Cylinders sold at high price) ಸಮಸ್ಯೆಯಾಗಿ ಪರಿಣಮಿಸುತ್ತಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ.

ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಕಮರ್ಷಿಯಲ್ ಗ್ಯಾಸ್ (Commercial Gas) ಪೂರೈಕೆ ಆಗದ ಹಿನ್ನೆಲೆ, ಹೋಟೆಲ್ ಮಾಲೀಕರು ಖಾಸಗಿ ಏಜೆನ್ಸಿಗಳಿಂದ ದುಪ್ಪಟ್ಟು ದರಕ್ಕೆ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ .

ಯುದ್ಧ ಪರಿಸ್ಥಿತಿಯ ಪರಿಣಾಮದಿಂದ ಗ್ಯಾಸ್ ಪೂರೈಕೆ ಮತ್ತು ಇಂಧನ ಸಂಬಂಧಿತ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ನೇರ ಪರಿಣಾಮವಾಗಿ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಪರಿಸ್ಥಿತಿಯಿಂದ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

Cylinders sold at high price

17 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಮೊದಲು ಸುಮಾರು 1,700 ರೂ. ಇದ್ದು, ಈಗ ಅದೇ ಸಿಲಿಂಡರ್ ಬೆಲೆ 3,600 ರೂ.ವರೆಗೆ ಏರಿಕೆಯಾಗಿದೆ.

ಖಾಸಗಿ ಏಜೆನ್ಸಿಗಳು ದುಪ್ಪಟ್ಟು ದರಕ್ಕೆ ಸಿಲಿಂಡರ್ ಮಾರಾಟ ಮಾಡುತ್ತಿರುವುದಕ್ಕೆ ಹೋಟೆಲ್ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಕೇವಲ 33 ಶೇಕಡಾ ಸಿಲಿಂಡರ್ ಮಾತ್ರ ಪೂರೈಕೆ ಆಗುತ್ತಿದ್ದು, ಅದು ಕೂಡ ಸಮಯಕ್ಕೆ (Cylinders sold at high price) ಸರಿಯಾಗಿ ಸಿಗುತ್ತಿಲ್ಲ ಎಂದು

ಹೋಟೆಲ್ ಉದ್ಯಮಿಗಳು ಆರೋಪಿಸಿದ್ದಾರೆ. ಇದರಿಂದ ಸಣ್ಣ ಹೋಟೆಲ್‌ಗಳು ಮತ್ತು ಪಿಜಿಗಳು ಹೆಚ್ಚಿನ ಸಂಕಷ್ಟ ಎದುರಿಸುತ್ತಿವೆ.

ಗ್ಯಾಸ್ ಅಭಾವದ ಕಾರಣದಿಂದ ಹೋಟೆಲ್‌ಗಳಲ್ಲಿ ಆಹಾರದ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಕೆಲವು ಹೋಟೆಲ್‌ಗಳು ತಿಂಡಿಗಳ ಮತ್ತು ಊಟದ ಬೆಲೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿವೆ.

ಗ್ಯಾಸ್ ದರ ಏರಿಕೆ, ತರಕಾರಿ ಬೆಲೆ ಏರಿಕೆ, ವಿದ್ಯುತ್ ವೆಚ್ಚ ಹೆಚ್ಚಳ ಇವೆಲ್ಲವೂ ಸೇರಿ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊರೆ ಉಂಟುಮಾಡಿವೆ.

ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಹೋಟೆಲ್ ನಡೆಸುವುದು ಕಷ್ಟವಾಗುತ್ತದೆ ಎಂದು ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ, ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ರಬ್ಬರ್ ಬೆಲೆ ಏರಿಕೆಯ ಪರಿಣಾಮ ವಾಹನಗಳ ಟೈಯರ್‌ಗಳ ದರದಲ್ಲೂ ಏರಿಕೆ ಕಂಡುಬಂದಿದೆ.

ಬಸ್ ಟೈಯರ್ ದರ 30 ಸಾವಿರದಿಂದ 31 ಸಾವಿರಕ್ಕೆ, ಲಾರಿ ಟೈಯರ್ 25 ಸಾವಿರದಿಂದ 26 ಸಾವಿರಕ್ಕೆ, ಕಾರು ಟೈಯರ್ 3,500 ರಿಂದ 3,700ಕ್ಕೆ ಮತ್ತು ದ್ವಿಚಕ್ರ ವಾಹನ ಟೈಯರ್ 1,200 ರಿಂದ 1,300ಕ್ಕೆ ಏರಿಕೆಯಾಗಿದೆ. ಇದರಿಂದ ಸಾರಿಗೆ ಕ್ಷೇತ್ರಕ್ಕೂ ಹೆಚ್ಚುವರಿ ಹೊರೆ ಉಂಟಾಗಿದೆ.

ಒಟ್ಟಾರೆ, ಅಂತರರಾಷ್ಟ್ರೀಯ ಯುದ್ಧದ ಪರಿಣಾಮ ರಾಜ್ಯದ ಜನಜೀವನದ ಮೇಲೂ ಪರಿಣಾಮ ಬೀರುತ್ತಿದ್ದು, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ.

ಗ್ಯಾಸ್, ಟೈಯರ್, ಇಂಧನ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಆರ್ಥಿಕ ಒತ್ತಡ ಅನುಭವಿಸುತ್ತಿದ್ದಾರೆ.

ಸರ್ಕಾರ ತಕ್ಷಣ ಕ್ರಮ ಕೈಗೊಂಡು ಗ್ಯಾಸ್ ಪೂರೈಕೆ ಹೆಚ್ಚಿಸಿದರೆ ಮಾತ್ರ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂಬುದು ಹೋಟೆಲ್ ಮಾಲೀಕರ ಅಭಿಪ್ರಾಯವಾಗಿದೆ.

ಇದನ್ನು ಓದಿ : https://vijayatimes.com/petrol-diesel-excise-duty-cut/

Tags: bengalurucommericalHotellpgcylinder

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.