• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮರ್ಯಾದಾ ಹತ್ಯೆ : ಪ್ರೀತಿ ಬೇಡ ಎಂಬ ಮಾತನ್ನು ಕೇಳದ ಮಗಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಂದೆ!

Mohan Shetty by Mohan Shetty
in ರಾಜ್ಯ
ಮರ್ಯಾದಾ ಹತ್ಯೆ : ಪ್ರೀತಿ ಬೇಡ ಎಂಬ ಮಾತನ್ನು ಕೇಳದ  ಮಗಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಂದೆ!
0
SHARES
1
VIEWS
Share on FacebookShare on Twitter

Bellari : ತನ್ನ ಮಗಳು ಬೇರೆ ಸಮುದಾಯದ ಹುಡುಗನ ಜೊತೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ಮನನೊಂದ ತಂದೆಯೇ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಮರ್ಯಾದಾ ಹತ್ಯೆ(Daughter Killed By Father) ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕದ(Karnataka) ಬಳ್ಳಾರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದು ಹಲವು ಬಾರಿ ಎಚ್ಚರಿಕೆ ನೀಡಿದರೂ, ಪ್ರಿಯಕರನೊಂದಿಗೆ ಪ್ರೀತಿಯ ಸಂಬಂಧವನ್ನು ಮುಂದುವರಿಸಲು ನಿರ್ಧರಿಸಿದ್ದಾಳೆ.

ಎಷ್ಟೇ ಬಾರಿ ಹೇಳಿದರೂ ಕಿವಿಗೊಡದ ಮಗಳ ವರ್ತನೆಯನ್ನು ಕಂಡು ಕೋಪಗೊಂಡ ತಂದೆ, ತನ್ನ ಮಗಳನ್ನು ಬಳ್ಳಾರಿ ಜಿಲ್ಲೆಯ ಕುಡತಿನಿ ಸಮೀಪವಿರುವ ಕಾಲುವೆಗೆ ತಳ್ಳಿದ್ದಾನೆ.

ಇದನ್ನೂ ಓದಿ : https://vijayatimes.com/govt-school-student-questions/

ಕೃತ್ಯ ಎಸಗಿದ ಬಳಿಕ ಪೊಲೀಸರ ಬಳಿ ಸಿಲುಕಿಕೊಂಡ ಬಳಿಕ ತಾನೇ ತನ್ನ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಅಕ್ಟೋಬರ್ 31 ರಂದು ಈ ಕೃತ್ಯ ನಡೆದಿದ್ದು, ಆರೋಪಿ ಓಂಕಾರ್ ಗೌಡ (Daughter Killed By Father)ತನ್ನ ಮಗಳನ್ನು ಸಿನಿಮಾಗೆ ಕರೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ.

ತಮ್ಮ ಮನೆಯಿಂದ ಸಿನಿಮಾ ನೋಡಲು ಹೊರಬಂದ ತಂದೆ-ಮಗಳು ಚಿತ್ರಮಂದಿರಕ್ಕೆ ಹೋಗಿಲ್ಲ! ಚಿತ್ರಮಂದಿರ ಬಿಟ್ಟು ದೇವಸ್ಥಾನಕ್ಕೆ ಹೋಗಿ,

https://youtu.be/49tPYYDsOhY

ಬಳಿಕ ಹತ್ತಿರದ ಅಂಗಡಿಯಿಂದ ಮಗಳಿಗೆ ಆಭರಣಗಳನ್ನು ಕೊಡಿಸಿದ್ದಾನೆ. ಅಲ್ಲಿಂದ ಮಗಳನ್ನು ಆ ಪ್ರದೇಶದ ಹೈಲೆವೆಲ್ ಕಾಲುವೆಗೆ ಕರೆದೊಯ್ದು ನೀರಿಗೆ ತಳ್ಳಿದ್ದಾರೆ.

Bellari
Image Credits : India Today

ಸಹಾಯಕ್ಕಾಗಿ ಬಾಲಕಿ ಕೂಗಿಕೊಂಡರೂ ಆಕೆಯ ತಂದೆ ಸಹಾಯ ಮಾಡದೆ ನಿಂತು ನೋಡಿದ್ದಾರೆ. ಮಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂಬುದನ್ನು ಖಚಿತಪಡಿಸಿಕೊಂಡ ಮೇಲೆ ಹೋಗಿದ್ದಾನೆ ಎನ್ನಲಾಗಿದೆ.

ಕೊಲೆ ಮಾಡಿದ ಬಳಿಕ ರಾತ್ರೋರಾತ್ರಿ ತಿರುಪತಿಗೆ ಪರಾರಿಯಾಗಿದ್ದಾನೆ. ಆದರೆ, ಯುವತಿಯ ತಾಯಿ ಮತ್ತು ಸಹೋದರ ಕುಡತಿನಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : https://vijayatimes.com/bbmp-quicks-up/

ಮಂಗಳವಾರ ತಂದೆ ಓಂಕಾರಗೌಡ ವಾಪಸ್ ಬಂದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ವಿಚಾರಣೆ ನಡೆಸಿದಾಗ ಮಗಳನ್ನು ಕೊಂದಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಯುವತಿಯ ಶವಕ್ಕಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Tags: bellariDaughterKarnatakakilled

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.