ಬೆಂಗಳೂರು, ಮಾ. 05: ಸಂಭಾವನೆಯನ್ನೇ ಪಡೆಯದೆ ನಟ ದರ್ಶನ್ ಕೃಷಿ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ನಟ ದರ್ಶನ್ಗೆ ಹಸಿರು ಶಾಲು ಹೊದಿಸಿ, ಮೈಸೂರು ಪೇಟಾ, ನೇಗಿಲು ಕೊಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನ ಮಾಡಿದರು. ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಸಮ್ಮುಖದಲ್ಲಿ ನಟ ದರ್ಶನ್ ನೂತನ ರಾಯಭಾರಿಯಾಗಿ ನೇಮಕಗೊಂಡರು.
ಈ ವೇಳೆ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಯಾವುದೇ ಸಂಭಾವನೆ ಪಡೆಯದೇ ನಟ ದರ್ಶನ್ ರಾಯಭಾರಿಯಾಗಿದ್ದಾರೆ. ಬೇರೆ ನಟರಾಗಿದ್ದರೆ ಕೋಟಿ ಕೋಟಿ ಹಣ ಪಡೆದು ಕಂಪನಿಗಳ ರಾಯಭಾರಿಯಾಗುತ್ತಿದ್ದರು. ಇಲ್ಲಿಯವರೆಗೆ ಕೃಷಿ ಇಲಾಖೆಯಲ್ಲಿ ಕಂಡು ಕೇಳರಿಯದ ಕಾರ್ಯಕ್ರಮ ಎಂದು ಸ್ಮರಿಸಿದರು.