ಮೈಸೂರು, ಜು. 06: ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ.
ಅದಕ್ಕೆ FIRನಲ್ಲಿ ಆತನ ಹೆಸರಿಲ್ಲ ಎಂದು ತಮ್ಮ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಪಘಾತ ಅಪಘಾತವೇ ಈ ಬಗ್ಗೆ ಯಾವುದೇ ಗೊಂದಲ ಬೇಡ. ಆದರೆ ಅಪಘಾತವಾದ ಕಾರಿನಲ್ಲಿ ನನ್ನ ಮಗ ಇದ್ದರು, ಅಪಘಾತ ಮಾಡು ಅಂತಾ ಹೇಳುತ್ತಿರಲಿಲ್ಲ. ನನ್ನ ಮಗ ತುರ್ತಾಗಿ ಗಾಯಗೊಂಡವರ ನೆರವಿಗೆ ಧಾವಿಸಿದ್ದಾನೆ. ಆದರೆ ಅವರು ಬದುಕಿ ಉಳಿದಿಲ್ಲ. ಎರಡು ದಿನದ ನಂತರ ಮೃತರ ಮನೆಗೆ ಭೇಟಿ. ಅವರಿಗೆ ಸಾಂತ್ವನ ಹೇಳಿ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವುದು ನನ್ನ ಕರ್ತವ್ಯ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ನಡುವೆ ಲಕ್ಷ್ಮಣ್ ಸವದಿ ಪುತ್ರನ ಕಾರು ಅಪಘಾತ ಪ್ರಕರಣದ ಕುರಿತು ಸ್ಪಷ್ಟನೆ ನೀಡಿರುವ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಅಪಘಾತವಾದ ಕಾರನ್ನು ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಾಲನೆ ಮಾಡುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.