ಮಾಜಿ ಕ್ರಿಕೆಟ್ ಕ್ಯಾಪ್ಟನ್ ಎಂಎಸ್ ಧೋನಿ #MS Dhoni ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, (Defamation Case against Dhoni) ಆರ್ಕಾ ಸ್ಪೋರ್ಟ್ಸ್ನೊಂದಿಗೆ ಗುತ್ತಿಗೆ ಮಾಡಿಕೊಂಡಿದ್ದ
ಧೋನಿ ತನಗೆ 16 ಕೋಟಿ ರೂ ವಂಚನೆ ಆರೋಪದ ಮೇಲೆ ರಾಂಚಿ ಕೋರ್ಟ್ವೊಂದರಲ್ಲಿ ಪ್ರಕರಣ ದಾಖಲಿಸಿದ್ದರು.

ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅವರ ಇಬ್ಬರು ಮಾಜಿ ಬಿಸಿನೆಸ್ ಪಾಲುದಾರರು (Business Partner) ಮಾನನಷ್ಟ ಮೊಕದ್ದಮೆ ಹಾಕಿದ್ದು, ದೆಹಲಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿದ್ದು,
ಗುರುವಾರ (ಜ.18) ನ್ಯಾ| ಪ್ರತಿಭಾ ಎಂ ಸಿಂಗ್ ಅವರಿರುವ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದೋನಿ ವಿರುದ್ಧ ದೂರು ದಾಖಲಿಸಿರುವುದು ಆರ್ಕಾ ಸ್ಪೋರ್ಟ್ಸ್ (Arka Sports) ಸಂಸ್ಥೆಯ
ನಿರ್ದೇಶಕರಾದ ಮಿಹಿರ್ ದಿವಾಕರ್ ಮತ್ತು ಅವರ (Defamation Case against Dhoni) ಪತ್ನಿ ಸೌಮ್ಯಾ ದಾಸ್.
ಧೋನಿ ಅವರಿಂದ ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಆರೋಪಗಳು ಬರದಂತೆ ನಿರ್ಬಂಧಿಸಬೇಕು ಮತ್ತು ಈಗಾಗಲೇ ಆಗಿರುವ ಮಾನಹಾನಿಗೆ ಪರಿಹಾರ ಕೊಡಿಸಬೇಕು ಎಂದು ಇವರು
ಎಂ ಎಸ್ ಧೋನಿ ವಿರುದ್ಧ ಕೋರ್ಟ್ (Court) ಮೆಟ್ಟಿಲೇರಿದ್ದಾರೆ.

ಏನಿದು ಪ್ರಕರಣ?
ಎಂಎಸ್ ಧೋನಿ ಈ ಮೊದಲು ಆರ್ಕಾ ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಬಿಸಿನೆಸ್ ಪಾಲುದಾರರು ಆಗಿದ್ದರು. ಆದರೆ, ಈ ಸಂಸ್ಥೆಯ ಇಬ್ಬರು ನಿರ್ದೇಶಕರಾದ ಮಹಿರ್ ದಿವಾಕರ್ (Mahir Diwakar)
ಮತ್ತು ಸೌಮ್ಯಾ ದಾಸ್ ವಿರುದ್ಧ ಧೋನಿ ಇತ್ತೀಚೆಗೆ ರಾಂಚಿ ಕೋರ್ಟ್ವೊಂದರಲ್ಲಿ ಕ್ರಿಮಿನಲ್ ಕೇಸ್ (Criminal Case) ದಾಖಲಿಸಿದ್ದರು. ಐಪಿಸಿ ಸೆಕ್ಷನ್ 406 ಮತ್ತು 420 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಧೋನಿ ಅವರು, ಕ್ರಿಕೆಟ್ ಅಕಾಡೆಮಿಗಳನ್ನು (Cricket Academy) ಸ್ಥಾಪಿಸುವ ಗುತ್ತಿಗೆಯ ವಿಚಾರದಲ್ಲಿ 16 ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದು, 2017ರಲ್ಲಿ ಆದ ಗುತ್ತಿಗೆ
ಪ್ರಕಾರ ಧೋನಿ ಹೆಸರಿನಲ್ಲಿ ವಿಶ್ವದ ವಿವಿಧೆಡೆ ಕ್ರಿಕೆಟ್ ಅಕಾಡೆಮಿಗಳನ್ನು ಪ್ರಾರಂಭಿಸಬೇಕಿತ್ತು. ಆದರೆ, ಈ ಗುತ್ತಿಗೆಯ ಅಂಶಗಳಿಗೆ ದಿವಾಕರ್ ಬದ್ಧವಾಗಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
2021ರ ಆಗಸ್ಟ್ 15ರಂದು ಧೋನಿ ಅವರು ಆರ್ಕಾ ಸ್ಪೋರ್ಟ್ಸ್ ಸಂಸ್ಥೆಗೆ ನೀಡಿದ್ದ ಆಥರೈಸೇಶನ್ ಲೆಟರ್ (Authorization Latter) ಅನ್ನು ಹಿಂಪಡೆದಿದ್ದರು. ಮಾತ್ರವಲ್ಲದೇ ಹಲವು ಬಾರಿ ಲೀಗಲ್
ನೋಟೀಸ್ಗಳನ್ನೂ ನೀಡಿದ್ದರು. ಒಪ್ಪಂದದ ಪ್ರಕಾರ ಆರ್ಕ ಸ್ಪೋರ್ಟ್ಸ್ ಸಂಸ್ಥೆ ಫ್ರಾಂಚೈಸಿ ಶುಲ್ಕ ಪಾವತಿಸಬೇಕು ಮತ್ತು ನಿಗದಿತ ಪ್ರಮಾಣದಲ್ಲಿ ಲಾಭವನ್ನು ವರ್ಗಾಯಿಸಬೇಕು. ಆದರೆ, ಈ
ನಿಯಮಗಳನ್ನು ಸಂಸ್ಥೆ ಪಾಲಿಸಿಲ್ಲ ಎಂದು ಎಂ ಎಸ್ ಧೋನಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ