ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆಗೆ ವೈದ್ಯರೇ ಸಾಥ್: ನಾಲ್ವರ ಬಂಧನ

Bengaluru: ಬೆಂಗಳೂರಿನ ಬೈಯಪ್ಪನಹಳ್ಳಿ (Baiyappanahalli) ಠಾಣೆ ಪೊಲೀಸರು, ಹೆಣ್ಣು ಭ್ರೂಣ (Detection of female fetus case) ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ

ಜಾಲವೊಂದನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರೇ ಸಾಥ್ ನೀಡುತ್ತಿದ್ದು, ಇದೀಗ (Detection of female fetus case) ಪೊಲೀಸರು ವೈದ್ಯರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ದಂಧೆಯಲ್ಲಿ 15 ರಿಂದ 20 ಸಾವಿರ ರೂಪಾಯಿ ಪಡೆದುಕೊಂಡು ಈ ದಂಧೆಗೆ ವೈದ್ಯರು ಸಹ ಸಾಥ್ ನೀಡುತ್ತಿದ್ದರು. ಇನ್ನು ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ,

ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನ್‌ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್‌ಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ

ಟಿ.ಎಂ.ವೀರೇಶ್ (T.N.Viresh) ಬಂಧಿತರು.

ಬಾತ್ಮೀದಾರರಿಂದ, ಹೆಣ್ಣು ಭ್ರೂಣ ಪತ್ತೆ ದಂಧೆ ಬಗ್ಗೆ ಮಾಹಿತಿ ಪಡೆದ ಇನ್‌ಸ್ಪೆಕ್ಟರ್‌ (Inspector) ಎಂ.ಪ್ರಶಾಂತ್ ಅವರು, ಕೂಡಲೇ ಪಿಎಸ್‌ಐ ಮಂಜುನಾಥ್‌, ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ

ಮಂಜುನಾಥ್, ಎಎಸ್‌ಐಗಳಾದ ಗೋವಿಂದರಾಜು, ನಾಗಯ್ಯ ಒಳಗೊಂಡ ತಂಡ ರಚಿಸಿಕೊಂಡು ದಂಧೆಕೋರರ ಬೆನ್ನುಹತ್ತಿದ್ದಾಗ ಆರೋಪಿಗಳು ಬಲೆಗೆ ಬಿದ್ದಿದ್ದಾರೆ.

ಗರ್ಭಿಣಿಯನ್ನು ಪರೀಕ್ಷೆಗೆ ಕರೆದೊಯ್ಯಲು ಹಳೇ ಮದ್ರಾಸ್‌ ರಸ್ತೆ ಕಡೆಯಿಂದ ವೀರೇಶ್ ತಂಡ ಬರುವ ಖಚಿತ ಮಾಹಿತಿ ಪಿಐ ಪ್ರಶಾಂತ್ ತಂಡಕ್ಕೆ ಸಿಕ್ಕಿದ್ದು, ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು,

ಹಳೇ ಮದ್ರಾಸ್‌ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು.

ಅದೇ ಸಮಯಕ್ಕೆ ಅಲ್ಲಿಗೆ ಬಂದ ದಂಧೆಕೋರರು, ಪೊಲೀಸರನ್ನು ಕಂಡು ಭೀತಿಯಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಅನುಮಾನಗೊಂಡ

ಪೊಲೀಸರು, ಕೂಡಲೇ ಆ ಕಾರನ್ನು ಬೈಕ್‌ಗಳಲ್ಲಿ ಸ್ಪಲ್ಪದೂರ ಫಾಲೋ ಮಾಡಿಕೊಂಡು ಹೋಗಿ ತಡೆದಿದ್ದಾರೆ. ಬಳಿಕ ಕಾರಿನಲ್ಲಿದ್ದ ಶಿವಲಿಂಗೇಗೌಡ (Shivalingegowda), ನಯನ್ ಹಾಗೂ

ಗರ್ಭಿಣಿಯನ್ನು ಠಾಣೆ ಕರೆತಂದು ವಿಚಾರಿಸಿದಾಗ ಸತ್ಯ ಬೆಳಕಿಗೆ ಬಂದಿದೆ.

ನಂತರ ಆರೋಪಿಗಳ ಮಾಹಿತಿ ಆಧರಿಸಿ ಮಂಡ್ಯ-ಪಾಂಡಪುರ (Mandya-Pandpura) ರಸ್ತೆಯಲ್ಲಿದ್ದ ಅಲೆಮನೆ ಮೇಲೆ ಪೊಲೀಸರು ಕ್ಷಿಪ್ರ ದಾಳಿ ನಡೆಸಿದಾಗ ಇನ್ನುಳಿದ್ದಿಬ್ಬರು ಸೆರೆಯಾಗಿದ್ದಾರೆ ಎಂದು

ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ದಂಧೆಕೋರರ ಅಡ್ಡೆಯಾದ ಪಾಂಡಪುರ ರಸ್ತೆಯ ಆಲೆಮನೆ ಮೇಲೆ ದಾಳಿ ನಡೆಸಿದಾಗ ಐದಕ್ಕೂ ಹೆಚ್ಚಿನ ಗರ್ಭೀಣಿಯರು ಪತ್ತೆಯಾಗಿದ್ದು, ಆ ಮಹಿಳೆಯರನ್ನು ವಿಚಾರಣೆ

ನಡೆಸಿ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ವೈದ್ಯರು, ಈ ಹೆಣ್ಣು ಭ್ರೂಣ ಲಿಂಗ ಪತ್ತೆ ದಂಧೆಗೆ ಸಹ ಸಾಥ್ ಕೊಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಈ ಘಟನೆ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ದಂಧೆಕೋರ ವೀರೇಶ್‌ನ

ಚಿಕ್ಕಪ್ಪ ಡಾ। ಮಲ್ಲಿಕಾರ್ಜುನ್ (Dr.Mallikarjun) ಸೇರಿದಂತೆ ಕೆಲವು ವೈದ್ಯರಿಗೆ ಹುಡುಕಾಟ ನಡೆದಿದೆ. ಇನ್ನು ಕಳೆದ ವರ್ಷ ಸಹ ಇದೇ ರೀತಿಯ ಪ್ರಕರಣದಲ್ಲಿ ಡಾ। ಮಲ್ಲಿಕಾರ್ಜುನ್ ಬಂಧಿತನಾಗಿದ್ದ.

ಬಳಿಕ ಜಾಮೀನು ಪಡೆದು ಹೊರಬಂದು ಮತ್ತೆ ಇದೇ ಕೆಲಸವನ್ನು ಮುಂದುವರೆಸಿದ್ದ.

ಇದನ್ನು ಓದಿ: ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ

Exit mobile version