ಅಭಿವೃದ್ದಿ ಮತ್ತು ಹಿಂದುತ್ವ ನನ್ನ ಮೊದಲ ಆಯ್ಕೆ – ಸಚಿವ ವಿ. ಸುನೀಲ್ ಕುಮಾರ್

ಉಡುಪಿ, ಆ. 06: ಅಭಿವೃದ್ದಿ ಮತ್ತು ಹಿಂದುತ್ವದಕ್ಕೆ ನನ್ನ ಮೊದಲ ಒತ್ತಾಗಿದ್ದು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ನೂತನ ಜಿಲ್ಲಾ ಉಸ್ತುವಾರಿ ಸಚಿವಾರದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಅವರು ಸಚಿವನಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದೇನೆ. ಇಲ್ಲಿಗೆ ಬರುತ್ತಿರುವುದು ಸಂತೋಷ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಕಾರ್ಕಳ ಜನತೆ ನನ್ನನ್ನು 3 ಬಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ ಆದ್ದರಿಂದ ಇಂದು ನಾನು ಸಚಿವನಾಗಿದ್ದೇನೆ. ಸಚಿವನಾದರೂ ಕೂಡ ಯಾವುದೇ ಕಾರಣಕ್ಕೂ ಅಭಿವೃದ್ದಿ ಮತ್ತು ಹಿಂದೂತ್ವದ ವಿಷಯದಲ್ಲಿ ಯಾವುದೇ ರೀತಿಯಲ್ಲೂ ರಾಜಿ ಮಾಡಿಕೊಳ್ಳುವುದಿಲ್ಲ. ಪಕ್ಷ  ನನಗೆ ಬಹು ದೊಡ್ಡ ಜವಬ್ದಾರಿಯನ್ನು ನೀಡಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಮತ್ತು ಮುಖಂಡರು ನನಗೆ ಹುದ್ದೆ ಕೊಟ್ಟಿದ್ದು ಅದನ್ನು ಪ್ರಾಮಾಣಿಕ ನಿರ್ವಹಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಹಾಲಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬಿಜೆಪಿ ಹಾಲಡಿ ಅವರನ್ನು ಖಂಡಿತವಾಗಿಯೂ ಗುರುತಿಸಿ ಮುಂದಿನ ದಿನಗಳಲ್ಲಿ ಅವರಿ ಸೂಕ್ತ ಸ್ಥಾನಮಾನ ನೀಡುತ್ತದೆ. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಅಂಗಾರ ಅವರ ಮಾರ್ಗದರ್ಶನದಲ್ಲಿನಾನು ಕೆಲಸ ಮಾಡುವುದಾಗಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

Exit mobile version