Mumbai : ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ (Maharashtra government) ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ (Mumbai) ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ. ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ (Eknath Shinde, Ajit Pawar) ಸಹ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. ‘ಮಹಾಯತಿ’ ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ.

ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ (BJP Legislature) ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು (Finance) ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ (Former CM Vijay Rupani) ಸಮ್ಮುಖದಲ್ಲಿ ಬಿಜೆಎಲ್ಪಿ (BJP) ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ (Maharashtra Legislative Assembly) ನವೆಂಬರ್ 20ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ ‘ಮಹಾಯತಿ’ ಮೈತ್ರಿಕೂಟ 230 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತವನ್ನು ಪಡೆದಿದ್ದು, ಹೊಸ ಸರ್ಕಾರವನ್ನು (New government) ರಚನೆ ಮಾಡಲಿದೆ. ಚುನಾವಣೆಯಲ್ಲಿ 132 ಸೀಟುಗಳನ್ನು ಗೆದ್ದಿರುವ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ. ಮೈತ್ರಿಕೂಟದಲ್ಲಿರುವ (Alliance) ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ.
ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ (Swearing in program of Govt) ಮುಂಬಯಿನ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 2 ಸಾವಿರ ಗಣ್ಯರು, 40 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.