• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಾಜಿ ಸಂಸದ, ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ

Pankaja by Pankaja
in ಪ್ರಮುಖ ಸುದ್ದಿ, ರಾಜಕೀಯ
ಮಾಜಿ ಸಂಸದ, ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ
0
SHARES
21
VIEWS
Share on FacebookShare on Twitter

Mysore : ಕಾಂಗ್ರೆಸ್‌ (Congress) ಕಾರ್ಯಾಧ್ಯಕ್ಷ ಮತ್ತು ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವನಾರಾಯಣ (R.Dhruvanarayana) ಅವರು ದಿಢೀರ್‌ ಹೃದಯಾಘಾತದಿಂದ ಇಂದು ಬೆಳಿಗ್ಗೆ ಮೈಸೂರಿನ (Dhruvanarayana passed away) ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Dhruvanarayana passed away

ರಂಗಸ್ವಾಮಿ ಧ್ರುವನಾರಾಯಣ ಅವರು ಚಾಮರಾಜನಗರ (Chamarajanagar) ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ 1961ರಲ್ಲಿ ಜನಿಸಿದ್ದರು.

ಅವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು. ಧ್ರುವನಾರಾಯಣ ಅವರು ವಿದ್ಯಾರ್ಥಿ ನಾಯಕರಾಗಿ (Dhruvanarayana passed away) ರಾಜಕೀಯ ಪಯಣ ಆರಂಭಿಸಿದ್ದರು.

1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದರು. 1984ರಲ್ಲಿ, ಅವರು ಬೆಂಗಳೂರಿನ ಹೆಬ್ಬಾಳದ ಕೃಷಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.

ಅದೇ ವರ್ಷದಲ್ಲಿ, ಅವರು ಬೆಂಗಳೂರು ನಗರದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರೂ ಆಗಿದ್ದರು.

1986 ರಲ್ಲಿ ಅವರು ಕರ್ನಾಟಕ ರಾಜ್ಯ (Karnataka State) ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : https://vijayatimes.com/cottage-cheese-benefits/

ಧ್ರುವನಾರಾಯಣ ಅವರು 1999ರಲ್ಲಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ (Assembly election) ಸಂತೇರ್ಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು.

2004ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಒಂದೇ ಮತದ ಅಂತರದಿಂದ ಜೆಡಿಎಸ್ (JDS) ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ವಿರುದ್ದ ಗೆದ್ದರು. 2008ರಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ 11,800 ಮತಗಳ ಅಂತರದಿಂದ ಗೆದ್ದಿದ್ದರು.

ಇದಾದ ಬಳಿಕ ಧ್ರುವನಾರಾಯಣ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ( Lok Sabha) ಸ್ಪರ್ಧಿಸಿ 15ನೇ ಲೋಕಸಭೆಗೆ ಆಯ್ಕೆಯಾದರು.

ನಂತರ 2014ರಲ್ಲಿ ಮತ್ತೊಮ್ಮೆ ಗೆಲ್ಲುವ ಮೂಲಕ 16ನೇ ಲೋಕಸಭೆಗೆ 1,41,182 ಮತಗಳ ಅಂತರದಿಂದ ಗೆದ್ದು ಸಂಸದರಾಗಿ ಆಯ್ಕೆಯಾದರು. ಆದರೆ 2019ರಲ್ಲಿ,

ಇದನ್ನೂ ಓದಿ : https://vijayatimes.com/high-court-important-order/

ಧ್ರುವನಾರಾಯಣ ಅವರು ಶ್ರೀನಿವಾಸ ಪ್ರಸಾದ್ ವಿರುದ್ಧ 17ನೇ ಲೋಕಸಭೆ ಚುನಾವಣೆಯಲ್ಲಿ 12,716 ಮತಗಳಿಂದ ಸೋತರು.

ಇದಾದ ಬಳಿಕ ಅವರು ರಾಜ್ಯ ರಾಜಕೀಯ ಪ್ರವೇಶಿಸುವ ಉದ್ದೇಶದಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಿದ್ದರು.

ಸದ್ಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದರು.

Dhruvanarayana passed away

ಗಡಿಜಿಲ್ಲೆ ಚಾಮರಾಜನಗರ ಭಾಗದ ಪ್ರಬಲ ದಲಿತ ನಾಯಕರಾಗಿದ್ದ ಧ್ರುವನಾರಾಯಣ ಅವರು ಈ ಭಾಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪ್ರಬಲ ಶಕ್ತಿಯಾಗಿದ್ದರು.

ಇದೀಗ ಧ್ರುವನಾರಾಯಣ ಅವರ ನಿಧನದಿಂದಾಗಿ ಕಾಂಗ್ರೆಸ್‌ ಪಕ್ಷ ಚಾಮಾರಾಜನಗರದಲ್ಲಿ ಪ್ರಬಲ ಶಕ್ತಿಯೊಂದನ್ನು ಕಳೆದುಕೊಂಡಿದೆ.

Tags: DeathKarnatakapolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.