ಡಿ.10ರಿಂದ ಪಂಚಲಿಂಗ ದರ್ಶನ: ಮುಖ್ಯಮಂತ್ರಿಗಳಿಗೆ ಆಹ್ವಾನ

ಬೆಂಗಳೂರು, ಡಿ. 08: ಡಿ.10ರಿಂದ 19ರವರೆಗೆ ನಡೆಯಲಿರುವ ತಲಕಾಡು ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರನ್ನು ಆಹ್ವಾನಿಸಿದರು.

ಬೆಂಗಳೂರಿನ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಚಿವರು, ಫಲತಾಂಬೂಲ ನೀಡಿ ಪಂಚಲಿಂಗ ದರ್ಶನದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಹಾಜರಿದ್ದರು.

ಡಿಸೆಂಬರ್ 10ರಿಂದ 19ರ ವರೆಗೆ ನಡೆಯಲಿದೆ. ಡಿಸೆಂಬರ್ 14 ರಂದು ವಿಶೇಷ ಕಾರ್ಯಕ್ರಮ ಇರುತ್ತದೆ. ಡಿಸೆಂಬರ್ 13ರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂದು ವಾಸ್ತವ್ಯ ಮಾಡಿ, ಡಿಸೆಂಬರ್ 14ರ ಮುಂಜಾನೆ ಪಂಚಲಿಂಗ ದರ್ಶನದ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.

Exit mobile version