ಯಾರು ಯಾರನ್ನೂ ಟಾರ್ಗೆಟ್‌ ಮಾಡಿಲ್ಲ… ಮೈಸೂರು ಮೇಯರ್‌ ವಿವಾದ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

ಉಡುಪಿ, ಮಾ. 01: ಸಿದ್ದರಾಮಯ್ಯ ಟಾರ್ಗೆಟ್‌ ಆರೋಪ ಸುಳ್ಳು. ಯಾರು ಯಾರನ್ನೂ ಟಾರ್ಗೆಟ್‌ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಮೈಸೂರು ಮೇಯರ್‌ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನೂ ಯಾರು ಕಟ್ಟಿ ಹಾಕಲು ಅವಕಾಶ ಕೊಟ್ಟಿಲ್ಲ. ನಮ್ಮ ನಾಯಕರ ಬಗ್ಗೆ ಯಾರೂ ಅವಹೇಳನಕಾರಿ ಹೇಳಿಕೆ ನೀಡುವಂತಿಲ್ಲ. ತನ್ವೀರ್‌ ಸೇಠ್‌ ಬಳಿ ಸ್ಪಷ್ಟನೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರು ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿಯಲ್ಲಿ ಒಪ್ಪಂದವನ್ನು ಅಲ್ಲಗಳೆಯಲಾಗಿದೆ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ತನ್ವೀರ್‌ ಸೇಠ್‌ ಕೂಡ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ ತನ್ವೀರ್‌ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದಿದ್ದಾರೆ.

Exit mobile version