ದಿನಕ್ಕೊಂದು ಪ್ರತಿಭಟನೆ ಮಾಡುವುದು ಸರಿಯಲ್ಲ: ಸಿಎಂ

ಬೆಂಗಳೂರು, ಡಿ.09: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ರೈತರು ಬಾರುಕೋಲು ಚಳುವಳಿ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನೆಲೆ ಪ್ರತಿಭಟನೆ ಕೈಬಿಡುವಂತೆ ರೈತ ಮುಖಂಡರ ಬಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ದಿನಕ್ಕೊಂದು ಪ್ರತಿಭಟನೆ ಮಾಡುವುದು ಸರಿಯಲ್ಲ. ರೈತರು ಬೆಳೆದ ಉತ್ಪನ್ನಗಳ ಆದಾಯ ಹೆಚ್ಚಿಸಬೇಕಾಗಿದೆ. ರೈತರ ಆದಾಯ ಹೆಚ್ಚು ಮಾಡಲು ಪ್ರಧಾನಿ ಮೋದಿ ಯೋಜನೆ ರೂಪಿಸಿದ್ದಾರೆ. ರೈತರ ಬಗ್ಗೆ ಕಾಳಜಿವಹಿಸಿಯೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸಮರ್ಥಿಸಿಕೊಂಡರು.

ಹಾಗೆಯೇ ನಿಮಗಿಂತ ನಮಗೆ ರೈತರ ಬಗ್ಗೆ ಹೆಚ್ಚಿನ ಕಾಳಜಿ ಇದೆ. ಹೀಗಾಗಿ ಪ್ರತಿಭಟನೆ ಕೈಬಿಡಿ ಏನಿದ್ದರೂ ಬನ್ನಿ ಕುಳಿತು ಚರ್ಚೆ ಮಾಡೋಣ ಎಂದು ರೈತ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದರು.

Exit mobile version