ಬೇಡರ ಕಣ್ಣಪ್ಪ(Bedara Kannappa) ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ ಎಂದಿದ್ದಾರೆ ಬಸವಣ್ಣ(Basavanna).
![Politics Siddaramaiah](https://sp-ao.shortpixel.ai/client/to_webp,q_glossy,ret_img,w_646,h_358/https://vijayatimes.com/wp-content/uploads/2022/08/Siddaramaiah-2-1024x569.jpg)
ಭಕ್ತಿ ಶುದ್ಧವಾಗಿರಬೇಕು ಎಂದು ಕಾಂಗ್ರೆಸ್ ನಾಯಕ(Congress Leader) ದಿನೇಶ್ ಗುಂಡೂರಾವ್(Dinesh GunduRao) ಅವರು ಸಿದ್ದರಾಮಯ್ಯನವರ(Siddaramaiah) ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿಯವರಿಗೆ(BJP) ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.
ಇದನ್ನೂ ಓದಿ : https://vijayatimes.com/jnu-vc-santishree-dhulipudi-pandit-statement/
ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ(Politics) ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಸವಾಲು ಹಾಕಿದ್ದಾರೆ.
![Dinesh Gundurao Congress](https://sp-ao.shortpixel.ai/client/to_webp,q_glossy,ret_img,w_642,h_360/https://vijayatimes.com/wp-content/uploads/2021/02/dinesh-gundu-rao1599132551-1024x576.jpg)
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ದತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ.ರವಿ(CT Ravi) ಮತ್ತು ಪ್ರತಾಪ ಸಿಂಹ(Prathap Simha) ಮಲೆನಾಡಿನವರು.
ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ. ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ?
![politics bjp](https://sp-ao.shortpixel.ai/client/to_webp,q_glossy,ret_img,w_600,h_400/https://vijayatimes.com/wp-content/uploads/2022/08/BJP.jpg)
ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ.? ಎಂದು ಪ್ರಶ್ನಿಸಿದ್ದಾರೆ.