Dharwad: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ತಲೆನೋವು ಉಂಟು (Dingaleshwar Swamiji U-Turn) ಮಾಡಿದ್ದ ಲಿಂಗಾಯತ ಸಮುದಾಯದ ಧಾರ್ಮಿಕ ಮುಖಂಡ
ದಿಂಗಾಲೇಶ್ವರ ಸ್ವಾಮೀಜಿ ಅವರ ಸ್ಪರ್ಧೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಅವರು ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.
ಮೂಲಗಳ ಪ್ರಕಾರ, ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಸೂಚನೆ
ನೀಡಿದ ಹಿನ್ನೆಲೆ ಅವರು ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಹಾಲಿ ಸಂಸದ ಪ್ರಹ್ಲಾದ್ ಜೋಶಿಗೆ (Prahlad Joshi) ರಿಲೀಫ್ ಸಿಕ್ಕಂತಾಗಿದೆ. ಇದೀಗ ಬಿಜೆಪಿಯ ಪ್ರಹ್ಲಾದ್
ಜೋಶಿ ಹಾಗೂ ಕಾಂಗ್ರೆಸ್ನ ವಿನೋದ್ ಅಸೂಟಿ (Dingaleshwar Swamiji U-Turn) ನಡುವೆ ನೇರ ಹಣಾಹಣಿ ನಡೆಯಲಿದೆ.
ಇಂದು (ಏಪ್ರಿಲ್ 22) ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಇಂದು ದಿಂಗಾಲೇಶ್ವರ ಸ್ವಾಮೀಜಿ ಅವರು ತಮ್ಮ ನಾಮಪತ್ರ ಹಿಂದಕ್ಕೆ ಪಡೆಯುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಧಾರವಾಡದಲ್ಲಿರುವ
ಖಾಸಗಿ ಹೋಟೆಲ್ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅವರು ತಮ್ಮ ಬೆಂಬಲಿಗರ ಹಾಗೂ ಭಕ್ತರ ಸಭೆ ನಡೆಸಿ, ನಂತರ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂಬ ಮಾಹಿತಿ.
ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲಿಂಗಾಯತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ದಿಂಗಾಲೇಶ್ವರ ಸ್ವಾಮೀಜಿ ಅವರು ಪ್ರಹ್ಲಾದ್ ಜೋಶಿ ವಿರುದ್ದ ಪಕ್ಷೇತರರಾಗಿ
ಕಣಕ್ಕೆ ಇಳಿದಿದ್ದರು. ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ಗೆ (Jagadish Shettar) ಟಿಕೆಟ್ ತಪ್ಪಲು, ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಯಲು ಪ್ರಹ್ಲಾದ್
ಜೋಶಿಯೇ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ಯೂಟರ್ನ್ (U Turn) ಹೊಡೆದಿದ್ದು, ತಮ್ಮ ನಾಮಪತ್ರ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ಅವರ ಸ್ಪರ್ಧೆಯಿಂದಾಗಿ ಲಿಂಗಾಯತ ಸಮುದಾಯದ ಮತಗಳು ವಿಭಜನೆಯಾಗುವ ಆತಂಕ ಬಿಜೆಪಿಗೆ ಎದುರಾಗಿತ್ತು. ದಿಂಗಾಲೇಶ್ವರ ಸ್ವಾಮೀಜಿ ಅವರು ಕಣದಿಂದ ಹಿಂದೆ
ಸರಿದಿರುವುದು ಬಿಜೆಪಿಗೆ ಮತ್ತಷ್ಟು ಬಲ ತಂದಿದೆ. ನೇಹಾ ಹಿರೇಮಠ (Neha Hiremath) ಹತ್ಯೆಯ ನಂತರ ದಿಂಗಾಲೇಶ್ವರ ಸ್ವಾಮೀಜಿ ಅವರು ಈ ನಿರ್ಧಾರಕ್ಕೆ ಬಂದಿರುವುದು ಕೂಡಾ ಚರ್ಚೆಗೆ ಕಾರಣವಾಗಿದೆ.
ಇದನ್ನು ಓದಿ: ರಾಷ್ಟ್ರೀಯ ಕಟ್ಟಡ ನಿರ್ಮಾಣ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ