ಉತ್ತರ ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಧಾನ ಸಿಎಂ ಸಭೆಗೆ ಗೈರು

ಬೆಳಗಾವಿ ಆ 21 : ಮುಖ್ಯಮಂತ್ರಿಯಾದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು ಈ ಹಿನ್ನಲೆಯಲ್ಲಿ ಬಿಜೆಪಿ ಹಲವು ಮುಖಂಡರು ಅವರ ಭೇಟಿಗೆ ಗೈರು ಹಾಜರಾಗುವ ಮೂಲಕ ಪರೋಕ್ಷವಾಗಿ ತಮ್ಮ ಅಸಮಧಾನ ಹೊರಹಾಕಿದ್ದಾರೆ.

ಇಂದು ಬೆಳಗಾವಿಯ ಹೆಲಿಪ್ಯಾಡ್‌ಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಶಾಸಕರಾದ ಅಭಯ್ ಪಾಟೀಲ್ ಹಾಗೂ ಅನಿಲ್ ಬೆನಕೆ ಹಾಗೂ ಇನ್ನಿತರ ಮುಖಂಡರು ಅವರನ್ನು ಬರಮಾಡಿಕೊಂಡರು.

ಸಿಎಂ ಸಭೆಗೆ ಗೈರು ಮತ್ತೆ ಬಿಜೆಪಿ ಶಾಸಕರ ಮುನಿಸು : ಸಿಎಂ ಕರೆದ ಸಭೆಗೆ ಬಿಜೆಪಿಯ ಕೆಲವು ಶಾಸಕರು ಗೈರು ಹಾಜರಾಗುವ ಮೂಲಕ ಮತ್ತೆ ಅವರ ಮುನಿಸನ್ನು ಪರೋಕ್ಷವಾಗಿ ತೋರಿಸಿದ್ದಾರೆ ಈ ಸಭೆಗೆ ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮತ್ತು ಅಭಯ್ ಪಾಟೀಲ್ ಕೂಡ ಗೈರು ಹಾಜರಾಗುವ ಮೂಲಕ ಪರೋಕ್ಷವಾಗಿ ತಮ್ಮ ಅಸಮಧಾನ ಹೊರಹಾಕಿದ್ದಾರೆ.

Exit mobile version