• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಪೆನ್ಸ್ ಪಾರ್ಕ್ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಪೆನ್ಸ್ ಪಾರ್ಕ್ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್
0
SHARES
42
VIEWS
Share on FacebookShare on Twitter
  • ಏರೋಸ್ಪೇಸ್ ಕ್ಷೇತ್ರದಲ್ಲಿ ಕರ್ನಾಟಕದ ಪ್ರಾಬಲ್ಯ (DK Shivakumar new plan ) ಹೆಚ್ಚಿಸಲು ಹೊಸ ಯೋಜನೆ
  • ಇದರಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ
  • ಬೆಂಗಳೂರು, ಮೈಸೂರು, ಬೆಳಗಾವಿ, ತುಮಕೂರು ಮತ್ತು ಚಾಮರಾಜನಗರದಲ್ಲಿ ಈ ಪಾರ್ಕ್‌ಗಳ ಸ್ಥಾಪನೆ

Bengaluru: ಕರ್ನಾಟಕ ಸರ್ಕಾರ ತನ್ನ ಕೈಗಾರಿಕಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ (DK Shivakumar new plan) ರಾಜ್ಯದ

ಐದು ಪ್ರಮುಖ ನಗರಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ರಕ್ಷಣಾ ಪಾರ್ಕ್‌ಗಳನ್ನು ನಿರ್ಮಿಸಲು ಮುಂದಾಗಿದೆ.

ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು,

ಮುಂದಿನ ದಶಕದಲ್ಲಿ ಕರ್ನಾಟಕ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

DK Shivakumar new plan

ತಂತ್ರಜ್ಞಾನ, ಅತ್ಯಾಧುನಿಕ ಉತ್ಪಾದನಾ ವಿಧಾನಗಳು, ಜಾಗತಿಕ ಮಟ್ಟದ (DK Shivakumar new plan) ಸಂಶೋಧನೆ, ಹಾಗೂ ಕೌಶಲ್ಯಯುತ

ಮಾನವ ಸಂಪನ್ಮೂಲ ಈ ನಾಲ್ಕು ಅಂಶಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.

ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪನ್ನಗಳ ಬೇಡಿಕೆ ಜಾಗತಿಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದೇಶದ ಮುಂಚೂಣಿ

ರಾಜ್ಯವಾಗಿರುವ ಕರ್ನಾಟಕ ತನ್ನ ಶಕ್ತಿಯನ್ನು ವಿಸ್ತರಿಸಲು ಇದು ಮಹತ್ವದ ಅವಕಾಶ ಎಂದು ಅವರು ತಿಳಿಸಿದ್ದಾರೆ.

ಈ ಪಾರ್ಕ್‌ಗಳು ಬರೀ ಕೈಗಾರಿಕಾ ಘಟಕಗಳಲ್ಲ, ಬದಲಾಗಿ ಸಂಶೋಧನೆ–ವಿಕಸನ ಕೇಂದ್ರಗಳು, ತರಬೇತಿ ಹಬ್‌ಗಳು ಮತ್ತು ಸ್ಟಾರ್ಟಪ್‌ಗಳಿಗೆ ವೇದಿಕೆಯಾಗಿ ರೂಪುಗೊಳ್ಳಲಿವೆ.

ಮುಂದಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ, ತುಮಕೂರು ಮತ್ತು ಚಾಮರಾಜನಗರದಲ್ಲಿ ಈ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.

ಭೌಗೋಳಿಕವಾಗಿ ವಿಭಿನ್ನ ಪ್ರದೇಶಗಳನ್ನು ಆಯ್ಕೆ ಮಾಡಿರುವುದು ಪ್ರಾದೇಶಿಕ ಸಮತೋಲನ ಮತ್ತು ಒಟ್ಟಾರೆ ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗಲಿದೆ.

ಬೆಂಗಳೂರಿನಲ್ಲೇ ಈಗಾಗಲೇ ಏರೋಸ್ಪೇಸ್ ಕೈಗಾರಿಕೆಗೆ ಸೂಕ್ತ ಪರಿಸರವಿದೆ .ಮೈಸೂರು ಮತ್ತು ಬೆಳಗಾವಿ ಕೈಗಾರಿಕಾ ಮೂಲಸೌಕರ್ಯದಲ್ಲಿ ವೇಗವಾಗಿ ಬೆಳೆಯುತ್ತಿವೆ.

ತುಮಕೂರು ಮತ್ತು ಚಾಮರಾಜನಗರದ ಆಯ್ಕೆಯು ಮುಂದಿನ ದಶಕದಲ್ಲಿ ಆ ಪ್ರದೇಶಗಳ ಆರ್ಥಿಕ ಪರಿಸ್ಥಿತಿಗೆ ಹೊಂದಿಕೆ ಆಗಲಿದೆ ಸರ್ಕಾರದ ಅಂದಾಜಿನ ಪ್ರಕಾರ, ಈ ಯೋಜನೆಯ ಮೂಲಕ ಸುಮಾರು 60,000 ಕೌಶಲ್ಯಯುತ ಉದ್ಯೋಗಗಳು ಸೃಷ್ಟಿಯಾಗಲಿದ್ದು, ರೂ. 45,000 ಕೋಟಿ ಹೂಡಿಕೆ ಆಕರ್ಷಿಸುವ ಅವಕಾಶವಿದೆ.

ಈ ಪಾರ್ಕ್‌ಗಳು ಸ್ಥಾಪನೆಯಾದ ಬಳಿಕ ಯುವಕರಿಗೆ ಅತ್ಯಾಧುನಿಕ ತಂತ್ರಜ್ಞಾನದಲ್ಲಿ ತರಬೇತಿ ನೀಡುವ ಅವಕಾಶ ಹೆಚ್ಚಾಗಲಿದೆ. ಖಾಸಗಿ ಕಂಪನಿಗಳು, ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ ಶಿಕ್ಷಣ ಸಂಸ್ಥೆಗಳು ರೂಪಿಸಲಾಗುತ್ತಿದೆ.

ಇದರಿಂದ ಜಾಗತಿಕ ಕಂಪನಿಗಳ ಸಹಕಾರ ದೊರಕುವ ಸಾಧ್ಯತೆ ಹೆಚ್ಚಿದ್ದು, ಕರ್ನಾಟಕವನ್ನು ಭಾರತದ ಏರೋಸ್ಪೇಸ್ ರಾಜಧಾನಿಯನ್ನಾಗಿಸುವ ಗುರಿ ಸರ್ಕಾರ ಹೊಂದಿದೆ ರಾಜ್ಯದ ಪ್ರತಿಭಾವಂತರಿಗೆ ಅಂತರರಾಷ್ಟ್ರೀಯ ಮಟ್ಟದ ವೇದಿಕೆ ಒದಗಿಸುವುದು ನಮ್ಮ ಉದ್ದೇಶ.

ಈ ಪಾರ್ಕ್‌ಗಳು ಭವಿಷ್ಯದ ರಕ್ಷಣಾ ತಂತ್ರಜ್ಞಾನಕ್ಕೆ ದಿಕ್ಕುನಿರ್ಧಾರ ಮಾಡಲಿವೆ ಎಂದು ಡಿ.ಕೆ. ಶಿವಕುಮಾರ್ ಅವರ ಹೇಳಿದ್ದಾರೆ.

ಇದನ್ನು ಓದಿ : ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಡಿಕೆ ಶಿವಕುಮಾರ್ 5 ಕೋಟಿ ರೂ. ಅನುದಾನ ಘೋಷಣೆ: ಹಸಿರು ಉಳಿವಿಗೆ ಬರಲಿದೆ ಹೊಸ ಯೋಜನೆಗಳು
Tags: bengaluruCongressdkshivakumarKarnatakapolitics

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.