- ಅನುದಾನ ಬಿಡುಗಡೆ ವಿಳಂಬಕ್ಕೆ ಕೇಂದ್ರವೇ (Dk Shivakumar slams on Centre) ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
- ಭದ್ರಾ ಮೇಲ್ದಂಡೆ, ನರೇಗಾ, ಜಲ ಜೀವನ್ ಮಿಷನ್ ಹಣ ಬಾಕಿ ಕುರಿತು ವಿಧಾನಸಭೆಯಲ್ಲಿ ತೀವ್ರ ಚರ್ಚೆ
- ಗೃಹಲಕ್ಷ್ಮಿ ಹಣ ಬಿಡುಗಡೆ ವಿಚಾರವಾಗಿ ಸದನದಲ್ಲಿ ಡಿಸಿಎಂ ಸ್ಪಷ್ಟನೆ
Belgavi: ಭದ್ರಾ ಮೇಲ್ದಂಡೆ ಯೋಜನೆ, ನರೇಗಾ ಹಾಗೂ ಜಲ ಜೀವನ್ ಮಿಷನ್ (Dk Shivakumar slams on Centre) ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದ ಬಾಕಿ ಅನುದಾನವನ್ನು ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ನಡೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಅನುದಾನಗಳನ್ನು ಬಿಡುಗಡೆ ಮಾಡದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ದಿವಾಳಿಯಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ಚಾಟಿ ಬೀಸಿದರು.
ವಿಧಾನಸಭೆಯ ಕಲಾಪದ ವೇಳೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಷಯವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಸದನಕ್ಕೆ ತಪ್ಪು
ಮಾಹಿತಿ ನೀಡಿದ್ದಾರೆ (Dk Shivakumar slams on Centre) ಎಂಬ ವಿಪಕ್ಷ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್,
ಜನಪ್ರತಿನಿಧಿಯಾಗಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯದ ಆಧಾರದಲ್ಲಿ ಪ್ರಶ್ನೆ ಕೇಳಿದ್ದಾರೆ.
ಆ ಪ್ರಶ್ನೆಗೆ ಸಚಿವರು ಉತ್ತರ ನೀಡಿದ ಸಂದರ್ಭದಲ್ಲೂ ನಾನು ಇದ್ದೆ.
ಕಂತುಗಳ ಆಧಾರದಲ್ಲಿ ಹಣ ಪಾವತಿಯಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದರು. ಸೆಪ್ಟೆಂಬರ್ ತಿಂಗಳವರೆಗೂ ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ಸದನಕ್ಕೆ ನೀಡಲಾಗಿದೆ ಎಂದು ವಿವರಿಸಿದರು.
ಈ ಮಧ್ಯೆ ಎರಡು ತಿಂಗಳ ಹಣ ಬಂದಿಲ್ಲ ಎಂಬ ಪ್ರಶ್ನೆ ಎತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಈ ವಿಚಾರವನ್ನು ಹಣಕಾಸು ಇಲಾಖೆಯ ಜವಾಬ್ದಾರಿ
ಹೊತ್ತಿರುವ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಕಾರಣಗಳಿಂದ ಕೆಲವೊಂದು ವಿಳಂಬಗಳಾಗಿರಬಹುದು.
ಆದರೆ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಿ ಎಂದು
ಬಿಜೆಪಿ ಶಾಸಕ ಸುನೀಲ್ ಕುಮಾರ್ (Sunil Kumar) ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನಿಮ್ಮ ಮಾತುಗಳು
ಅಸಂಬದ್ಧವಾಗಿವೆ ಎಂದು ಕಿಡಿಕಾರಿದರು.
ಇನ್ನು ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ವಿಳಂಬದ ಕುರಿತು ಉದಾಹರಣೆ ನೀಡಿದ ಡಿಸಿಎಂ, ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ್ದರು.
ಅದರ ಆಧಾರದ ಮೇಲೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ರಾಜ್ಯ ಬಜೆಟ್ನಲ್ಲೂ
ಹಣ ಘೋಷಣೆ ಮಾಡಿದ್ದರು. ಆದರೆ ಇಂದಿಗೂ ಆ ಹಣ ಬಿಡುಗಡೆಯಾಗಿಲ್ಲ.
ಇನ್ನು ನರೇಗಾ ಹಾಗೂ ಜಲ ಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಅನುದಾನವೂ ಬಾಕಿಯಾಗಿದೆ.
ಹಾಗೆಂದು ನಾವು ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎಂದು ಹೇಳುವುದಿಲ್ಲ ಎಂದು ಹರಿಹಾಯ್ದರು.
ಕೊನೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ
ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆಯಾದರೂ ಒಪ್ಪುವುದಿಲ್ಲ ಎಂದು ಹೇಳಿದ್ದರು.
ನಾವು ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಬದ್ಧರಾಗಿದ್ದೇವೆ. ನಮ್ಮ ಯೋಜನೆಗಳನ್ನು ನಕಲು
ಮಾಡಿಕೊಂಡೇ ಎನ್ಡಿಎ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತಿದೆ.
ಈ ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇದನ್ನು ಓದಿ : https://vijayatimes.com/no-fuel-without-puc-certificate/