ಡಿ.ಕೆ. ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು ಅ 28 : ಕೆಪಿಸಿಸಿ ಆಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಯು.ಬಿ ಶೆಟ್ಟಿ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಧಾರವಾಡ ದಾಸನಕೊಪ್ಪ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಯು.ಬಿ ಶೆಟ್ಟಿಯ ಜೊತೆಗೆ ಡಿ.ಕೆ. ಶಿವಕುಮಾರ್‌ ಆಪ್ತರಾದ ರಾಬರ್ಟ್‌ ದದ್ದಾಪುರಿ ಮತ್ತು ಆನಂದ್‌ ಜಾಧವ್‌ ಅವರಿಗೂ ಕೂಡ ಐಟಿ ಅಧಿಕಾರಿಗಳು ಬುಲಾವ್‌ ನೀಡಿದ್ದಾರೆ.  

ಗುತ್ತಿಗೆದಾರ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ ಹಿನ್ನೆಲೆ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಹೇಳಿಕೆ ನೀಡಿದ್ದು ಮಾಧ್ಯಮದಲ್ಲಿ ಐಟಿ ದಾಳಿ ಸುದ್ದಿ ನೋಡಿ ಬಂದಿದ್ದೇನೆ. ನಮಗೆ ಒಳಗೆ ಹೋಗಲು ಬಿಡಲಿಲ್ಲ. ಬಳಿಕ ಶೆಟ್ಟಿ ಅವರೇ ಫೋನ್ ಮಾಡಿದರು. ಇಬ್ಬರು ಸಾಕ್ಷಿ ಬೇಕು ಅಂತಾ ಕೇಳಿದರು. ಇಬ್ಬರು ಸಾಕ್ಷಿದಾರರನ್ನು ಕೊಟ್ಟಿದ್ದೇವೆ. ಇತ್ತೀಚಿಗೆ ಅವರು ಶಿಕ್ಷಣ ಕ್ಷೇತ್ರಕ್ಕೆ ಬಂದಿದ್ದಾರೆ. ಇತ್ತೀಚಿಗೆ ಗುತ್ತಿಗೆ ಕಾಮಗಾರಿ ಬಿಟ್ಟಿದ್ದಾರೆ. 80 ನೇ ಇಸ್ವಿಯಿಂದಲೂ ಡಿಕೆ ಶಿವಕುಮಾರ್​ ಅವರೊಂದಿಗೆ ಒಡನಾಟ ಹೊಂದಿದ್ದಾರೆ. ಉಡುಪಿ, ಮಂಗಳೂರಿನಲ್ಲಿ ಚುನಾವಣೆಗೆ ಶೆಟ್ಟಿ ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿಯಾಗಿರಬಹುದು ಎಂದು ತಿಳಿಸಿದ್ದಾರೆ.ರಾಜ್ಯದ ಪ್ರತಿಷ್ಠಿತ ಗುತ್ತಿಗೆದಾರರಾಗಿರುವ ಯು.ಬಿ.ಶೆಟ್ಟಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಉಪ್ಪುಂದ ಗ್ರಾಮದವರು.

Exit mobile version