• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
0
SHARES
11
VIEWS
Share on FacebookShare on Twitter

ಕುತೂಹಲ ಮೂಡಿಸಿದ ಸಿಎಂ ಡಿಕೆಶಿ (DK visit to Delhi highcommand) ದೆಹಲಿ ಭೇಟಿ : ಸಚಿವ ಸ್ಥಾನಕ್ಕಾಗಿ ನಾಯಕರ ಲಾಬಿ ಜೋರು

ರಾಜ್ಯಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ; ಹೊಸ ಮುಖಗಳಿಗೆ ಆದ್ಯತೆ ನೀಡುವ ಕುರಿತು ಹೈಕಮಾಂಡ್ ಚರ್ಚೆ

ಹಲವು ಹಿರಿಯರು ಹಾಗೂ ಮೊದಲ ಬಾರಿಗೆ ಆಯ್ಕೆಯಾದ ಶಾಸಕರ ನಡುವೆ ಸಚಿವ ಸ್ಥಾನಕ್ಕಾಗಿ ಪೈಪೋಟಿ.

Bengaluru : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ (DK visit to Delhi highcommand) ಕುರಿತು ರಾಜಕೀಯ ಚಟುವಟಿಕೆಗಳು ಈಗ ದೆಹಲಿಯ ಅಂಗಳದಲ್ಲಿ ವೇಗ ಪಡೆದುಕೊಂಡಿವೆ.

ಮೂರು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ, ಪಕ್ಷದ ಹಿರಿಯ ನಾಯಕರೊಂದಿಗೆ ಮಹತ್ವದ ಚರ್ಚೆಗಳನ್ನು ನಡೆಸುತ್ತಿದ್ದು, ಎರಡನೇ ಹಂತದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನಗಳು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಹಾಗೂ ಕರ್ನಾಟಕದ ಏಳು ವಿಧಾನ ಪರಿಷತ್ (Legislative Council) ಸ್ಥಾನಗಳ ಚುನಾವಣೆಯ ನಂತರವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಮುಂದುವರಿಯಲಿದೆ ಎನ್ನಲಾಗುತ್ತಿದೆ.

DK visit to Delhi highcommand

ಪ್ರಸ್ತುತ 13 ಸಚಿವರೊಂದಿಗೆ ಆಡಳಿತ ಆರಂಭಿಸಿರುವ ಸರ್ಕಾರದಲ್ಲಿ ಇನ್ನೂ ಅನೇಕ ಸ್ಥಾನಗಳು ಖಾಲಿ ಉಳಿದಿದ್ದು, ಆ ಸ್ಥಾನಗಳ ಭರ್ತಿಗೆ ಪಕ್ಷದ ಒಳಗೇ ತೀವ್ರ ಪೈಪೋಟಿ ನಡೆಯುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಯುವ ಮತ್ತು ಚುರುಕು ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವ ಚಿಂತನೆ ನಡೆಸಿದೆ ಎಂಬ ಮಾಹಿತಿ ಪಕ್ಷದ ವಲಯಗಳಿಂದ ಕೇಳಿಬರುತ್ತಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯುವ ಶಾಸಕರಿಗೆ ಅವಕಾಶ (DK visit to Delhi highcommand) ಕಲ್ಪಿಸಬೇಕೆಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಇದರ ಪರಿಣಾಮವಾಗಿ ಹಲವು ಹಿರಿಯ ನಾಯಕರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಲೆಕ್ಕಾಚಾರ ಆರಂಭಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಕಾದು ಕುಳಿತಿರುವ ಹಲವಾರು

ಶಾಸಕರು ಹಾಗೂ ಹಿರಿಯ ಮುಖಂಡರು ತಮ್ಮ ಪರ ಲಾಬಿ ನಡೆಸಲು ದೆಹಲಿಯತ್ತ ಮುಖ ಮಾಡಿದ್ದು, ರಾಜಕೀಯ ಚಟುವಟಿಕೆಗಳಿಗೆ ಹೊಸ ತಿರುವು ದೊರೆತಿದೆ.

ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ರಾಷ್ಟ್ರೀಯ ನಾಯಕರ ಮುಂದೆ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ನಡೆಯುತ್ತಿರುವ ವಿವಿಧ ಸಭೆಗಳು ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಅವರು, ರಾಜ್ಯದ ರಾಜಕೀಯ ಸಮೀಕರಣಗಳ ಕುರಿತು ಹೈಕಮಾಂಡ್‌ಗೆ

(Highcommand) ವಿವರ ನೀಡುತ್ತಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಮತೋಲನ ಸಾಧಿಸುವುದು ನಾಯಕತ್ವಕ್ಕೆ ಸವಾಲಾಗಿ ಪರಿಣಮಿಸಿದೆ.

ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪಕ್ಷದ ಒಳವಲಯಗಳು ಹೇಳುತ್ತಿವೆ.

ಈ ನಡುವೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಕೆಲ ಯುವ ನಾಯಕರ ಹೆಸರುಗಳು ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿವೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ (A.S. Ponnanna) , ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ (Nayana Motamma)

ಹಾಗೂ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಸೇರಿದಂತೆ ಹಲವು ಯುವ ಮುಖಂಡರಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಮೂಡಿದೆ.

ಮತ್ತೊಂದೆಡೆ, ಕೆಲ ಹಿರಿಯ ನಾಯಕರಿಗೆ ಸ್ಪೀಕರ್ ಅಥವಾ ಇತರ ಪ್ರಮುಖ ಹುದ್ದೆಗಳನ್ನು ನೀಡುವ ಕುರಿತು ಕೂಡ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದರಿಂದ ಸಂಪುಟ

ವಿಸ್ತರಣೆ ಕೇವಲ ಸಚಿವ ಸ್ಥಾನಗಳ ಹಂಚಿಕೆಗೆ ಸೀಮಿತವಾಗದೇ, ಪಕ್ಷದ ಭವಿಷ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ.

ಆದರೆ ಸಚಿವ ಸಂಪುಟ ವಿಸ್ತರಣೆ ಕುರಿತು ನಡೆಯುತ್ತಿರುವ ಊಹಾಪೋಹಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Shivakumar) ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಅಧಿಕೃತ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ದೆಹಲಿಗೆ ತಮ್ಮ ಭೇಟಿ ಪಕ್ಷದ ನಾಯಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಡೆದಿದ್ದು, ಸೋನಿಯಾ ಗಾಂಧಿ (Sonia Gandhi) , ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಪಕ್ಷದ ಒಳಗೆ ನಡೆಯುತ್ತಿರುವ ಚಟುವಟಿಕೆಗಳು ಮತ್ತು ನಾಯಕರು ನಡೆಸುತ್ತಿರುವ ಲಾಬಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಜೂನ್ 21ರೊಳಗೆ ಎರಡನೇ ಹಂತದ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

ರಾಜ್ಯದ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಈ ಸಂಪುಟ ವಿಸ್ತರಣೆಯ ನಿರ್ಧಾರ ಈಗ ಎಲ್ಲರ ಗಮನ ಸೆಳೆದಿದೆ.

ಇದನ್ನು ಓದಿ : https://vijayatimes.com/fifa-world-cup-begin-today/

Tags: cabinetCongresshighcommandNewdelhipolitics

Related News

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು
ಪ್ರಮುಖ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು

July 16, 2026
ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ
ಪ್ರಮುಖ ಸುದ್ದಿ

ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ

July 16, 2026
ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.