Bengaluru: ಸಿ.ಎಂ ಸಿದ್ದರಾಮಯ್ಯ (DKS-Jarkiholi – Secret Meeting) ಅವರು ಮೊನ್ನೇ ಅಷ್ಟೇ ಗುಪ್ತವಾಗಿ ಸತೀಶ್ ಜಾರಕಿಹೊಳಿ ಹಾಗೂ ಪರಮೇಶ್ವರ್ ಅವರನ್ನು ಭೇಟಿ ಮಾಡಿ
ಮಹತ್ವದ ಮಾತುಕತೆ ನಡೆಸಿದ್ದರು, ಈ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar) ಅವರು ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ರಹಸ್ಯ ಮಾತುಕತೆ
ನಡೆಸಿ ಅಲ್ಲಿಂದ ನೇರವಾಗಿ ದೆಹಲಿಯತ್ತ (DKS-Jarkiholi – Secret Meeting) ಪ್ರಯಾಣ ಬೆಳೆಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಂಗಳೂರಿನ (Bengaluru) ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾತಕಿಹೊಳಿಯವರ ಸರ್ಕಾರಿ ನಿವಾಸಕ್ಕೆ ಇಂದು (ನವೆಂಬರ್ 07) ಬೆಳಗ್ಗೆ ಡಿಕೆ ಶಿವಕುಮಾರ್ ಭೇಟಿ ನೀಡಿ ಮಹತ್ವದ ಮಾತುಕತೆ
ನಡೆಸಿದ್ದು, ಬೆಳಗಾವಿ ರಾಜಕೀಯದಲ್ಲಿ ಸತೀಶ್ ಜಾರಕಿಹೊಳಿ (Satish Jarkiholi) ಅಸಮಾಧಾನಗೊಂಡಿರುವ ಮಧ್ಯೆ ಡಿಕೆ ಶಿವಕುಮಾರ್ ಭೇಟಿ ಕುತೂಹಲ ಮೂಡಿಸಿದೆ.
ಪರಮೇಶ್ವರ್ (Parameshwar) ನಿವಾಸದಲ್ಲಿ ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್, ಸಚಿವರಾದ ಹೆಚ್ ಸಿ ಮಹದೇವಪ್ಪ
(H C Mahadevappa) ಹಾಗೂ ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಒಳಗಿಂದೊಳಗೆ ಆಗುತ್ತಿರುವ ಗೊಂದಲಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದರು.
ಇನ್ನು ಡಿಕೆ ಶಿವಕುಮಾರ್ ಭೇಟಿ ಬಗ್ಗೆ ಖುದ್ದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಡಿಸಿಎಂ (DCM) ಅವರು ರಾಜಕೀಯ ವಿಚಾರ ಬಗ್ಗೆ ಚರ್ಚಿಸಿದ್ದಾರೆ. ಸಂಘಟನೆ, ಎಂಪಿ ಚುನಾವಣೆ,
ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಕತೆ ಮಾಡಿದ್ದು, ಬೆಳಗಾವಿ ವಿಚಾರದಲ್ಲಿ ಮಾತಾಡುವಂತಹದ್ದು ಏನಿಲ್ಲ ಎಂದು ಸ್ಪಷ್ಟಪಡಿಸಿದರು.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ (KPCC) ಕಾರ್ಯಧ್ಯಕ್ಷ ಹಾಗೂ ಕೆಲ ಜಿಲ್ಲಾಧ್ಯಕ್ಷರ ಬದಲಾವಣೆ ಸೇರಿದಂತೆ ಇನ್ನಿತರ ವಿಚಾರದ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದು, ಅಲ್ಲಿ ಎಐಸಿಸಿ (AICC) ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ದೆಹಲಿಗೆ ತೆರಳುವ ಮುನ್ನ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.
ಇದನ್ನು ಓದಿ: ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಮಾಡಿದ ಬಿಬಿಎಂಪಿ: ವ್ಯಾಪಾರಿಗಳ ವಿರೋಧ
- ಭವ್ಯಶ್ರೀ ಆರ್ ಜೆ