• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜನರ ಜೀವದ ಜತೆ ಚೆಲ್ಲಾಟ‌ ಬೇಡ, ಅಧಿಕಾರ ಬಿಟ್ಟು ನಡೆಯಿರಿ: ಡಿ.ಕೆ ಶಿವಕುಮಾರ್ ಗುಡುಗು

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಜನರ ಜೀವದ ಜತೆ ಚೆಲ್ಲಾಟ‌ ಬೇಡ, ಅಧಿಕಾರ ಬಿಟ್ಟು ನಡೆಯಿರಿ: ಡಿ.ಕೆ ಶಿವಕುಮಾರ್ ಗುಡುಗು
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ. 07: ಜನಸಾಮಾನ್ಯರು ಸಾಯುತ್ತಿರುವಾಗ ಬಿಜೆಪಿ ನಾಯಕರು ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೇ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕೆಳಗಿಳಿಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ. ಯಾವ ಸಚಿವರು ಯಾವ ಮಠಕ್ಕೆ ಬಂದಿದ್ದಾರೆ, ಯಾವ ಸಚಿವರು ಲ್ಯಾಪ್ ಟಾಪ್ ಸಮೇತ ಬಂದಿದ್ದರು ಎಂದು ಎಂದು ನನಗೆ ನಮ್ಮ ಕಾರ್ಯಕರ್ತರೇ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ.

ನಾನು ಕೂಡ ಈ ಮಾಹಿತಿ ಪರಿಶೀಲಿಸಿದ್ದು, ಮಠದವರೇ ಅವರಿಗೆ ಬುದ್ಧಿವಾದ ಹೇಳಲಿ. ಯಾವ ಬುದ್ಧಿಮಾತು ಹೇಳಬೇಕು ಎಂಬುದು ಅವರಿಗೆ ಬಿಟ್ಟದ್ದು, ಅದನ್ನು ಹೇಳುವುದು ನನ್ನ ಕೆಲಸವಲ್ಲ. ಈ ಮಧ್ಯೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ 65 ಜನ ಶಾಸಕರು ಸಿಎಂ ಬೆಂಬಲ ಪತ್ರಕ್ಕೆ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಅವರಿಗೆ ಗೌರವ ಇರುವುದು ನಿಜವೇ ಆದರೆ ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ. ಅನಂತರ ನಾವು ಮುಂದಿನ ಪ್ರತಿಕ್ರಿಯೆ ನೀಡುತ್ತೇವೆ.

ಗ್ರಾಮೀಣಾಭಿವೃದ್ಧಿ ಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದನ್ನೂ ನಾವು ನೋಡಿದ್ದೇವೆ. ಮಠಗಳಿಗೆ ಹೋಗಿದ್ದನ್ನೂ ನೋಡಿದ್ದೇವೆ, ಸಿಡಿ ವಿಚಾರ ನೋಡಿದ್ದೇವೆ. ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ, ಅದಕ್ಕೆ ಹೇಗೆ ಉಲ್ಟಾ ಹೊಡೆದಿದ್ದಾರೆ ಎಂಬುದನ್ನೂ ನೋಡಿದ್ದೇವೆ. ಇವರಿಗೆ ಚೆಲ್ಲಾಟ ಜನರಿಗೆ ಪ್ರಾಣ ಸಂಕಟ. ಇವರು ಜನರನ್ನು ರಕ್ಷಿಸುವ ಬದಲು, ಹೆಣಗಳ ಬೂದಿ ನೀಡುತ್ತಿದ್ದಾರೆ.

ಒಟ್ಟಾರೆ ಈ ಸರ್ಕಾರದ ಆಡಳಿತ ಯಂತ್ರ ಕುಸಿದಿದೆ. ಶಾಸಕರು ಬೀದಿಗಳಲ್ಲಿ ಕಚ್ಚಾಡುತ್ತಿದ್ದಾರೆ. ಸಚಿವರ ಮಧ್ಯೆ ಭಿನ್ನಾಭಿಪ್ರಾಯ ನೋಡಿದ್ದೇವೆ. ಒಬ್ಬರು ಲಸಿಕೆಗೆ ಜಾಗತಿಕ ಟೆಂಡರ್ ಅಂತಾರೆ, ಆರೋಗ್ಯ ಸಚಿವರು ಈ ಬಗ್ಗೆ ಗೊತ್ತಿಲ್ಲ ಅಂತಾರೆ.

ಅಧಿಕಾರಿಗಳು ಕಚ್ಚಾಡುತ್ತಿದ್ದಾರೆ. ಏನೆಲ್ಲ ಸಮಸ್ಯೆಗಳಿಂದ ಜನ ನರಳುತ್ತಿರುವಾಗ ಇವರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ನಾವು ಅವರ ಕಚ್ಚಾಟದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಸರ್ಕಾರ ಕೋವಿಡ್ ಸಮಸ್ಯೆ ಬಗೆಹರಿಸಲಿ. ಅಧಿಕಾರಿಗಳ ಆಡಿಯೋ ಸಾಕ್ಷಿಯನ್ನು ಬಿಜೆಪಿ ನಾಯಕರು ನ್ಯಾಯಾಲಯಕ್ಕೆ ನೀಡಲಿ.

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.