• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಂದೆ ಮತ್ತು ಪ್ರೇಯಸಿಯ ಕೊಲೆಗೆ ಬಿಗ್ ಟ್ವಿಸ್ಟ್‌ !

Preetham Kumar P by Preetham Kumar P
in ಪ್ರಮುಖ ಸುದ್ದಿ
ಹೆತ್ತಮ್ಮನಿಗೆ ಸುಪಾರಿ ಕೊಟ್ಟ ಮಗ !
1
SHARES
0
VIEWS
Share on FacebookShare on Twitter

  ಮೈಸೂರು: ಮೈಸೂರಿನ ಹೊರವಲಯದಲ್ಲಿ ಜೋಡಿ ಕೊಲೆಯಾಗಿದೆ. ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿ ಕೊಲೆ ನಡೆದ ಘಟನೆ ಮೈಸೂರಿನ ಶ್ರೀನಗರದಲ್ಲಿ ನಡೆದಿದೆ.

ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಮತ್ತು ಶ್ರೀನಗರದ ನಿವಾಸಿ ಲತಾ (48) ಕೊಲೆಯಾದವರು. ಕೊಲೆಗೈದ ಆರೋಪಿ ಸಾಗರ್ ನಾಪತ್ತೆಯಾಗಿದ್ದಾನೆ. ಲತಾ ಮನೆಗೆ ನುಗ್ಗಿದ್ದ ಸಾಗರ್ ಮಚ್ಚಿನಿಂದ ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಮೊದಲು ತಂದೆಯನ್ನು ಕೊಲೆ ಮಾಡಿದ ಸಾಗರ್ ನಂತರ ಲತಾಳಿಗೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ. ಲತಾ ಮೇಲೆ ಹಲ್ಲೆ ನಡೆಸುವಾಗ  ಆಕೆಯ ಪುತ್ರ ನಾಗಾರ್ಜುನ್ ಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು 56 ವರ್ಷ ಪ್ರಾಯಾದ ವ್ಯಕ್ತಿಯ ಹೆಸರು ಶಿವಪ್ರಕಾಶ್ ಅಲಿಯಾಸ್ ಸೀಮೆಎಣ್ಣೆ ಪ್ರಕಾಶ ಮೈಸೂರಿನ ಕನ್ನೇಗೌಡನಕೊಪ್ಪಲು ನಿವಾಸಿ. ಟ್ರಾವಲ್ಸ್ ಉದ್ಯಮಿಯಾದ ಪ್ರಕಾಶ್‌ನನ್ನು ಆತನ ಮಗ ಸಾಗರ್ ಕೊಲೆ ಮಾಡಿದ್ದಾನೆ. ಕೊಲೆಗೆ ತಂದೆಯ ಅನೈತಿಕ ಸಂಬಂಧ ಕಾರಣ ಎನ್ನಲಾಗುತ್ತಿದ್ದರೂ, ದುಶ್ಚಟಗಳಿಗೆ ಬಲಿಯಾಗಿದ್ದ ಮಗ ಹಣಕ್ಕಾಗಿ ಪೀಡಿಸಿ ತಂದೆಯನ್ನು ಕೊಂದಿದ್ದಾನೆ ಎನ್ನಲಾಗುತ್ತಿದೆ. ಗುರುವಾರ ರಾತ್ರಿ 9.30ರ ಸಮಯದಲ್ಲಿ ಕೊಲೆ ನಡೆದಿದ್ದು, ತಂದೆ ಮತ್ತೊಬ್ಬ ಮಹಿಳೆಯ ಮನೆಯಲ್ಲಿ ಉಳಿದುಕೊಂಡಿದ್ದ ಸಂದರ್ಭದಲ್ಲಿ ಕೊಲೆ ಮಾಡಲಾಗಿದೆ.

ಶಿವಪ್ರಕಾಶ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಅದರಲ್ಲಿ ಒಬ್ಬಳು ಮಗಳು ಹಾಗೂ ಮತ್ತೊಬ್ಬ ಮಗ ಸಾಗರ್. ಸಾಕಷ್ಟು ಹಣವಂತನಾಗಿದ್ದ ಶಿವಪ್ರಕಾಶ್ ಕಳೆದ 20 ವರ್ಷಗಳಿಂದ ಲತಾ ಮತ್ತೊಬ್ಬ ಮಹಿಳೆ ಜೊತೆ ಸಂಬಂಧ ಬೆಳೆಸಿದ್ದ. ಲತಾ ಮೂಲತಃ ಹೆಚ್‌ಡಿ.ಕೋಟೆ ತಾಲೂಕು ಹೊಸಳ್ಳಿ ಗ್ರಾಮದವಳು. ಲತಾ ಗಂಡ ನಾಗರಾಜು ಈಗ ಕೊಲೆ ಆಗಿರುವ ಶಿವಪ್ರಕಾಶ್ ಬಳಿ ಕಾರು ಚಾಲಕನಾಗಿದ್ದ. ಆಗಿಂದಲೂ ಶಿವಪ್ರಕಾಶ್ ನಾಗರಾಜು ಮನೆಗೆ ಬಂದು ಹೋಗುವ ಪರಿಪಾಠ ಬೆಳೆಸಿಕೊಂಡಿದ್ದಾನೆ. 20 ವರ್ಷಗಳ ಹಿಂದೆಯೇ ಲತಾ ಗಂಡ ನಾಗರಾಜು ಅನಾರೋಗ್ಯದಿಂದ ಸಾವನ್ನಪ್ಪಿದ್ದ. ನಾಗರಾಜು ಸಾವನ್ನಪ್ಪಿದ ನಂತ ಲತಾ ಹಾಗೂ ಶಿವಪ್ರಕಾಶ್ ಒಟ್ಟಿಗೆ ದಿನ ಕಳೆಯಲು ಆರಂಭಿಸಿದ್ದಾರೆ. ಈಗಾಗಿ ಹೆಚ್‌.ಡಿ.ಕೋಟೆಯ ಹೊಸಳ್ಳಿಯಲ್ಲಿ ಲತಾ ಕುಟುಂಬವನ್ನು ಮೈಸೂರಿಗೆ ತಂದು ಇರಿಸಿದ್ದ ಶಿವಪ್ರಕಾಶ್.

ತಂದೆ ಮೇಲೆ ಮಗ ಸಿಟ್ಟಾಗಲು ಹಣಕಾಸಿನ ವಿಚಾರವೂ ಕಾರಣ ಎನ್ನಲಾಗಿದೆ. ಶಿವಪ್ರಕಾಶ್ ಮಗ ಸಾಗರ್ ಜೂಜಾಟದ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಐಪಿಲ್ ದಂದೆಯಲ್ಲಿ ಸುಮಾರು‌ 70 ಲಕ್ಷ ಹಣ ಸಾಲ ಮಾಡಿಕೊಂಡಿದ್ದನಂತೆ. ಆದರೆ ತಂದೆ ಶಿವಪ್ರಕಾಶ್ ಮಗನ ಈ ಸಾಲವನ್ನೂ ಇತ್ತೀಚೆಗೆ ತೀರಿಸಿದ್ದ. ಸಾಲ ತೀರಿಸಿದ ನಂತರವೂ ಮಗ ಹಣಕ್ಕಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದನಂತೆ. ಈ ವಿಚಾರ ಮುನ್ನೆಲೆಗೆ ಬಂದಾಗಲೆಲ್ಲ ನನಗೆ ಸೇರಬೇಕಾದ ಹಣವನ್ನೆಲೆ ನೀನು ಬೇರೆಯವರಿಗೆ ಸುರಿಯುತ್ತಿದ್ದೀಯೆ ಎಂದು ದೊಡ್ಡ ಗಲಾಟೆ ಮಾಡುತ್ತಿದ್ದನಂತೆ. ರಾತ್ರಿಯೂ ಇದೇ ಗಲಾಟೆ ವಿಕೋಪಕ್ಕೆ ತಿರುಗಿ ತಂದೆ ಹಾಗೂ ಆತನ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸದ್ಯ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾಗರ್ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. 

Tags: double murderFatherSon

Related News

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023
ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?
ಪ್ರಮುಖ ಸುದ್ದಿ

ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?

March 15, 2023
ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ
ಪ್ರಮುಖ ಸುದ್ದಿ

ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.