ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರದ ಬದ್ಧತೆ
ಯುವಜನರನ್ನು ಡ್ರಗ್ಸ್ ಪಿಡುಗಿನಿಂದ ರಕ್ಷಿಸಲು ಶಾಲೆ, ಕಾಲೇಜು, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಅಭಿಯಾನ
ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Bengaluru : ರಾಜ್ಯವನ್ನು ಸಂಪೂರ್ಣವಾಗಿ ಮಾದಕ ದ್ರವ್ಯ (drugfree Karnataka says Priyank Kharge) ಮುಕ್ತವಾಗಿಸಲು ಕರ್ನಾಟಕ ಸರ್ಕಾರ ಸಮಗ್ರ ಕಾರ್ಯತಂತ್ರ ರೂಪಿಸಿದ್ದು, ಡ್ರಗ್ಸ್ ಜಾಲವನ್ನು ನಿರ್ಮೂಲನೆ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyanka Kharge) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯುವ ಪೀಳಿಗೆಯನ್ನು ಈ ಅಪಾಯಕಾರಿ ಪಿಡುಗಿನಿಂದ ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ಜಾಗೃತಿ ಮೂಡಿಸುವ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಅವರು ನಿರ್ದೇಶನ ನೀಡಿದರು.
ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಹಾಗೂ ಗ್ರಾಮ ಪಂಚಾಯಿತಿ (drugfree Karnataka says Priyank Kharge) ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಸೂಚಿಸಲಾಗಿದೆ.
ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಜಾಗೃತಿ ಅಭಿಯಾನಗಳನ್ನು ವ್ಯಾಪಕವಾಗಿ ನಡೆಸಲು ಸಂಬಂಧಿತ ಇಲಾಖೆಗಳು ಕೈಜೋಡಿಸಬೇಕೆಂದು ಸಚಿವರು ಹೇಳಿದರು.
ಸಮಾಜದ ಪ್ರತಿಯೊಬ್ಬ ನಾಗರಿಕರೂ ಈ ಹೋರಾಟದಲ್ಲಿ ಪಾಲ್ಗೊಂಡಾಗ ಮಾತ್ರ ಪರಿಣಾಮಕಾರಿ ಫಲಿತಾಂಶ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮಾದಕ ದ್ರವ್ಯಗಳ ಸರಬರಾಜು ಜಾಲದ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಯಾವುದೇ ರೀತಿಯ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಡ್ರಗ್ಸ್ (Drugs) ಮಾರಾಟ, ಸಾಗಣೆ ಮತ್ತು ವಿತರಣೆಯಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ
ನೀಡಿದರು. ಜೊತೆಗೆ, ಈಗಿರುವ ಕಾನೂನುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಅಪರಾಧ ಚಟುವಟಿಕೆಗಳಿಗೆ ಸಂಪೂರ್ಣ ತಡೆ ಹಾಕುವಂತೆ ಸೂಚಿಸಿದರು.
ಡ್ರಗ್ಸ್ ನಿಯಂತ್ರಣ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ ಎಂದು ತಿಳಿಸಿದ ಸಚಿವರು, ಗೃಹ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ,
ಸಮಾಜ ಕಲ್ಯಾಣ, ಕಾರ್ಮಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಸುಧಾರಿತ ತಂತ್ರಜ್ಞಾನ ಮತ್ತು ದತ್ತಾಂಶ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮಾಹಿತಿ ವಿನಿಮಯ ಹಾಗೂ ಮೇಲ್ವಿಚಾರಣೆಯನ್ನು ಬಲಪಡಿಸುವಂತೆ ಅವರು ಸೂಚಿಸಿದರು.
ಗ್ರಾಮ ಪಂಚಾಯಿತಿ ಮಟ್ಟದವರೆಗೂ ಸಂಪರ್ಕ ವ್ಯವಸ್ಥೆಯನ್ನು ವಿಸ್ತರಿಸಿರುವ ಕರ್ನಾಟಕ ರಾಜ್ಯ ವ್ಯಾಪಕ ವಲಯ ಜಾಲ (KSWAN 3.0) ಯೋಜನೆಯನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರ ಸಹಭಾಗಿತ್ವವೂ ಈ ಅಭಿಯಾನದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದು ಗೃಹ ಸಚಿವರು ಹೇಳಿದರು.
ಡ್ರಗ್ಸ್ ಮಾರಾಟ ಅಥವಾ ಬಳಕೆಯ ಕುರಿತು ಸಾರ್ವಜನಿಕರು ಮಾಹಿತಿ ನೀಡಲು ಜನಸ್ಪಂದನ (iPGRS) ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು ತಿಳಿಸಿದರು.
ನಾಗರಿಕರಿಂದ ಬಂದ ದೂರುಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ತಲುಪಿಸಿ ನಿಗದಿತ ಅವಧಿಯೊಳಗೆ ಕ್ರಮ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ.
ಕಾನೂನು ಜಾರಿ, ತಂತ್ರಜ್ಞಾನ ಬಳಕೆ ಹಾಗೂ ಸಾರ್ವಜನಿಕರ ಸಹಕಾರದ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ : https://vijayatimes.com/ineligible-bpl-card-cancel/