New Delhi: ದೆಹಲಿ ಮದ್ಯ ನೀತಿ (Delhi Liquor Policy) ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ (Banu Priya) ಅವರು ಸುಪ್ರೀಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದು, ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ. ಹೀಗಾಗಿ ಉನ್ನತ ಸ್ಥಾನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಇಡಿ ವಿರೋಧಿಸಿದೆ.
ಇಡಿ ಸುಪ್ರೀಂಕೋರ್ಟ್ಗೆ (Supreem Cout) ಸಲ್ಲಿಸಿರುವ ಆಕ್ಷೇಪಣೆಯಲ್ಲಿ, ನಮ್ಮ ಸಂವಿಧಾನದ ಪ್ರಕಾರ ಚುನಾವಣೆಗಾಗಿ (Election) ಪ್ರಚಾರ ಮಾಡುವ ಹಕ್ಕು ಮೂಲಭೂತ ಹಕ್ಕಲ್ಲ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು (political leader) ಅಭ್ಯರ್ಥಿಯಲ್ಲದಿದ್ದರೇ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಬೇಕು ಎಂದು ತನಿಖಾ ಸಂಸ್ಥೆ ಹೇಳಿದೆ.
ಇನ್ನು ಕಳೆದ 3 ವರ್ಷಗಳಲ್ಲಿ ದೇಶಾದ್ಯಂತ (All over the world ) 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಗಳನ್ನು ಬಂಧಿಸಲು (arrest) ಹಾಗೂ ವಿಚಾರಣೆ ನಡೆಸಲು ಸಾಧ್ಯವಾಗುವುದಿಲ್ಲ. ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ. ಸಾರ್ವತ್ರಿಕ ಚುನಾವಣೆಯಲ್ಲಿ (general election) ಪ್ರಚಾರಕ್ಕಾಗಿ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ವಿರುದ್ದವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅಥವಾ ರಾಜಕೀಯ ನಾಯಕ ಎನ್ನುವ ಕಾರಣಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ವಿನಾಯಿತಿ ನೀಡಬಾರದು ಎಂದು ಇಡಿ ಅಫಿಡವಿಟ್ನಲ್ಲಿ ಹೇಳಿದೆ.
ಇನ್ನು ದೆಹಲಿ (Delhi Liquor Policy) ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಇಡಿ ಬಂಧಿಸಿದೆ. ಕಳೆದ ಅನೇಕ ದಿನಗಳಿಂದ ಇಡಿ ವಶದಲ್ಲಿರುವ ಅರವಿಂದ್ ಕೇಜ್ರಿವಾಲ್ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಜಾಮೀನು ನೀಡಬಾರದು ಎಂದು ಇಡಿ ವಾದಿಸುತ್ತಿದೆ.