- ಶಾಸಕರ ಪಿಎಗಳ ಮನೆ ಮೇಲೂ ಇಡಿ ರೇಡ್ ಮಾಡಲಾಗಿದೆ
- ಬೆಳಗಿನ ಜಾವ ನಾಲ್ಕಕ್ಕೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ
- ವಾಲ್ಮೀಕಿ ಹಗರಣದ ಹಣ ಬಳ್ಳಾರಿ ಲೋಕಸಭಾ ಕ್ಷೇತ್ರ ಚುನಾವಣೆಗೆ ಬಳಕೆ ಆರೋಪ
Bellary: ವಾಲ್ಮೀಕಿ ನಿಗಮದ ಹಗರಣದ (Valmiki Corporation scam) ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಇ.ಡಿ ಅಧಿಕಾರಿಗಳು (ED officials) ಸಂಸದ ಇ.ತುಕಾರಾಮ್,
ಶಾಸಕ ಭರತ್ ರೆಡ್ಡಿ (MLA Bharat Reddy) ಸೇರಿದಂತೆ ಹಲವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ (House of Representatives) ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.
ಸಂಸದ ಇ. ತುಕಾರಾಂ (E. Tukaram) , ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharat Reddy) , ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ.
\ನಾಗೇಂದ್ರ (MLA B. Nagendra) ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ (Attack simultaneously) ನಡೆದಿದೆ.
ಇ.ಡಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು (MPs and MLAs) ತಮ್ಮ ನಿವಾಸಗಳಲ್ಲಿ ಇದ್ದರು ಎಂದು ತಿಳಿದು ಬಂದಿದೆ.
ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ (MPs and MLAs) ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲ.
ಆದರೆ, ನಾಗೇಂದ್ರ (Nagendra) ಆಪ್ತ ಗೋವರ್ಧನ್ ರೆಡ್ಡಿ (Govardhan Reddy) ಮನೆ ಮೇಲೆ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ (Valmiki Corporation scam) ತನಿಖೆಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ (Lok Sabha elections) ಮತದಾರರಿಗೆ ಹಣ ನೀಡಲು ನಿಗಮದ ಹಣವನ್ನು ಬಳಸಲಾಗಿದೆ ಎಂಬ ಆರೋಪವಿದ್ದು,

ಸುಮಾರು 20 ಕೋಟಿ ಹಣವನ್ನು ಬಳ್ಳಾರಿ ನಗರ (Bellary City) , ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ (Comply and agree) ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಸಂಸದ ಇ.ತುಕಾರಾಮ್ (E. Tukaram) , ಮಾಜಿ ಶಾಸಕ ನಾಗೇಂದ್ರ ಮತ್ತು ಅವರ ಆಪ್ತ ಕಾರ್ಯದರ್ಶಿ ಗೋವರ್ಧನ್ (Private Secretary Govardhan) , ಶಾಸಕ ಭರತ್ ರೆಡ್ಡಿ,
ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ (Ganesh’s residence) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ,
ಹಲವು ದಾಖಲೆಗಳು ಹಾಗೂ ಲ್ಯಾಪ್ಟಾಪ್, ಮೊಬೈಲ್ (Laptop, mobile) , ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಎಂಟು ತಂಡಗಳಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ (Home offices) ಶೋಧ ಕಾರ್ಯ ಮುಂದುವರೆದಿದೆ. ಬಳ್ಳಾರಿ ಗ್ರಾಮಾಂತರ,
ಕಂಪ್ಲಿ, ಕೂಡ್ಲಿಗಿ, ಸಂಡೂರು ಕ್ಷೇತ್ರಗಳಲ್ಲಿ (Sandur areas) ವಾಲ್ಮೀಕಿ ಹಗರಣದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪದ (Accused) ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಪ್ರತಿ ಮತದಾರರಿಗೆ ಶಾಸಕರ ಮೂಲಕ ಮತದಾರರಿಗೆ ಇನ್ನೂರು ರೂಪಾಯಿಯಂತೆ ಹಣ ಹಂಚಿಕೆ ಮಾಡಲಾಗಿದೆ.
ಇದನ್ನು ಓದಿ : http://ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ಸೇರಿದಂತೆ ನಾಲ್ವರ ಬಂಧನ
ಪ್ರಮುಖ ಪಾತ್ರದಲ್ಲಿ ಮಾಜಿ ಸಚಿವ ನಾಗೇಂದ್ರ (Former Minister Nagendra) ಅವರಿದ್ದು, ಶಾಸಕ ಮತ್ತು ಸಂಸದರು ಈ ವಹಿವಾಟಿನಲ್ಲಿ ಭಾಗಿಯಾಗಿರಬಹುದು ಎಂದು ದಾಳಿ ಮಾಡಿದ್ದಾರೆ ಎನ್ನಲಾಗಿದೆ.