• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಲ್ಪಸಂಖ್ಯಾತರ ಶಾಲೆಗಳಲ್ಲಿ ಧಾರ್ಮಿಕ ಬೋಧನೆ ನಿಷೇಧಕ್ಕೆ ಕ್ರಮ : ಬಿ.ಸಿ ನಾಗೇಶ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
bc nagesh
0
SHARES
0
VIEWS
Share on FacebookShare on Twitter

ಅಲ್ಪಸಂಖ್ಯಾತರ ಶಾಲೆಗಳಲ್ಲಿ ಧಾರ್ಮಿಕ ಗ್ರಂಥಗಳ ಬೋಧನೆಯನ್ನು ನಿಷೇಧಿಸಲಾಗುವುದು. ಎಲ್ಲ ಧರ್ಮದ ಮಕ್ಕಳು ಓದುವ ಶಾಲೆಗಳಲ್ಲಿ ಕೇವಲ ಒಂದು ಧರ್ಮದ ಬೋಧನೆ ಮಾಡುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ(Education Minister) ನಾಗೇಶ್(BC Nagesh) ತಿಳಿಸಿದ್ದಾರೆ.

BC-Nagesh

ಬೆಂಗಳೂರಿನ(Bengaluru) ಕ್ಲಾರೆನ್ಸ್(Clarence) ಪ್ರೌಡಶಾಲೆಯಲ್ಲಿ ಬೈಬಲ್(Bible) ಬೋಧನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯ ಘಟನೆಗಳು ಅನೇಕ ಕಡೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಶಾಲೆಗಳಲ್ಲಿ ಧಾರ್ಮಿಕ ಬೋಧನೆ ನಮ್ಮ ಶೈಕ್ಷಣಿಕ ನೀತಿಗಳಿಗೆ ವಿರುದ್ದವಾಗಿದೆ. ಹೀಗಾಗಿ ಎಲ್ಲ ಅಲ್ಪಸಂಖ್ಯಾತ ಶಾಲೆಗಳ ಪಠ್ಯಪುಸ್ತಕಗಳನ್ನು ಪರಿಶೀಲಿಸುವಂತೆ ಬಿಇಒಗಳಿಗೆ ಸೂಚನೆ ನೀಡಿದ್ದೇವೆ. ಧಾರ್ಮಿಕ ಬೋಧನೆಯಲ್ಲಿ ತೊಡಗಿರುವ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಇದನ್ನೂ ಓದಿ : https://vijayatimes.com/question-paper-leak-culprit/

ಇನ್ನು ಅಲ್ಪಸಂಖ್ಯಾತರ ಶಾಲೆಗಳಲ್ಲಿ ಧಾರ್ಮಿಕ ಬೋಧನೆ ಮಾಡುತ್ತಿರುವುದನ್ನು ಖಂಡಿಸಬೇಕಾದ ಬುದ್ದಿಜೀವಿಗಳು ಈಗ ಮಾಯವಾಗಿದ್ದಾರೆ. ಕೆಲವು ಆಯ್ದ ವಿಷಯಗಳ ಬಗ್ಗೆ ಮಾತ್ರ ಅವರು ಮಾತನಾಡುತ್ತಾರೆ. ಸಮಾನತೆ, ಜಾತ್ಯಾತೀತತೆ, ಸಂವಿಧಾನ ಎಂದು ಭಾಷಣ ಮಾಡುವ ಜಾತ್ಯಾತೀತವಾದಿಗಳೆಲ್ಲಾ ಈ ಘಟನೆಯನ್ನು ಖಂಡಿಸುವುದಿಲ್ಲ. ಇಂತಹ ಘಟನೆಗಳ ಕುರಿತು ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : https://vijayatimes.com/diabetic-health-tips/

ಇನ್ನು ಬೆಂಗಳೂರಿನ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ಕೈಸ್ತ್ರ ಧರ್ಮಗ್ರಂಥ ಬೈಬಲ್ ಬೋಧಿಸಲು ಅನುಮತಿ ಪಡೆಯಲು, ಶಾಲಾ ಪ್ರವೇಶ ಅರ್ಜಿಯಲ್ಲಿ ಒಪ್ಪಿಗೆ ಸೂಚಿಸುವಂತೆ ಕೇಳಲಾಗಿತ್ತು. ಶಾಲೆಯ ಈ ಕ್ರಮವನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಎಲ್ಲ ಧರ್ಮದ ಮಕ್ಕಳು ಓದುವ ಶಾಲೆಯಲ್ಲಿ ಕೈಸ್ತ್ರ ಮತಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದವು. ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿಯಾಗಿ ಶಾಲೆಯ ಮಾನ್ಯತೆ ರದ್ದು ಮಾಡುವಂತೆ ಮನವಿ ಮಾಡಲಾಗಿತ್ತು.

school

ಇದೀಗ ಶಿಕ್ಷಣ ಇಲಾಖೆ ಕ್ಲಾರೆನ್ಸ್ ಪ್ರೌಢಶಾಲಾ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೆ ಸಮಗ್ರ ವರದಿ ನೀಡುವಂತೆಯೂ ಸೂಚಿಸಿದೆ.

Tags: clarencehighschoolissueKarnataka

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.