ಮೇ 30ರಿಂದ ದೇಶಾದ್ಯಂತ (Election Commission announces voter lists) ಮತದಾರರ ಪಟ್ಟಿ ಪರಿಷ್ಕರಣೆ ಆರಂಭ
ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ಹಂತ-3 ಜಾರಿ
ಅನರ್ಹ ಹೆಸರುಗಳ ತೆರವು, ಅರ್ಹ ಮತದಾರರ ಸೇರ್ಪಡೆಗೆ ಚುನಾವಣಾ ಆಯೋಗ ಕ್ರಮ
New delhi : ದೇಶಾದ್ಯಂತ ಮತದಾರರ ಪಟ್ಟಿಯನ್ನು ಇನ್ನಷ್ಟು ಪಾರದರ್ಶಕ ಹಾಗೂ ನಿಖರಗೊಳಿಸುವ (Election Commission announces voter lists) ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲು ಸಜ್ಜಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಗುರುವಾರ ಈ ಕುರಿತು ಮಹತ್ವದ ಮಾಹಿತಿ ನೀಡಿದ್ದು, ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ
ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೇ 30ರಿಂದ ಈ ಮಹತ್ವಾಕಾಂಕ್ಷಿ ಅಭಿಯಾನ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ಪ್ರಕ್ರಿಯೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರೆ, ಇದೀಗ ದೇಶದ ಇನ್ನಷ್ಟು ಭಾಗಗಳಿಗೆ ಇದನ್ನು ವಿಸ್ತರಿಸಲಾಗುತ್ತಿದೆ.
ಚುನಾವಣಾ ಆಯೋಗದ ಪ್ರಕಾರ, ಅರ್ಹ ಮತದಾರರ ಹೆಸರುಗಳು ಮಾತ್ರ ಮತದಾರರ (Election Commission announces voter lists) ಪಟ್ಟಿಯಲ್ಲಿ ಉಳಿಯಬೇಕು ಹಾಗೂ ಅನರ್ಹ ಅಥವಾ ನಕಲಿ ದಾಖಲೆಗಳನ್ನು ತೆಗೆದುಹಾಕುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯಂತೆ, ಹಂತ-3ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಸುಮಾರು 36 ಕೋಟಿ ಮತದಾರರನ್ನು ಒಳಗೊಂಡಿರಲಿದೆ.
ಈ ಬಾರಿ ನಡೆಯುತ್ತಿರುವ ಜನಗಣತಿಯ ಮನೆ ಪಟ್ಟಿ ಕಾರ್ಯಾಚರಣೆಯೊಂದಿಗೆ ಮತದಾರರ ಪರಿಶೀಲನೆ ಪ್ರಕ್ರಿಯೆಯನ್ನು ಸಂಯೋಜಿಸಲಾಗಿದೆ.
ಇದರಿಂದ ಕ್ಷೇತ್ರ ಮಟ್ಟದ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ತ್ವರಿತವಾಗಿ ಪತ್ತೆಹಚ್ಚುವ ಯೋಜನೆ
ರೂಪಿಸಲಾಗಿದೆ. ಆಯೋಗದ ಅಂಕಿ-ಅಂಶಗಳ ಪ್ರಕಾರ, 3.94 ಲಕ್ಷಕ್ಕೂ ಅಧಿಕ ಬೂತ್ ಮಟ್ಟದ ಅಧಿಕಾರಿಗಳು (BLOs) ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಮತದಾರರು ತಮ್ಮ ಮಾಹಿತಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಹಕರಿಸಬೇಕು ಎಂದು ಆಯೋಗ ಮನವಿ ಮಾಡಿದೆ.
ಎಣಿಕೆ ಫಾರ್ಮ್ಗಳನ್ನು ಭರ್ತಿ ಮಾಡುವುದರಿಂದ ಅಂತಿಮ ಪಟ್ಟಿಯಲ್ಲಿ ತಪ್ಪುಗಳ ಪ್ರಮಾಣ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಶೇಷ ಪರಿಷ್ಕರಣೆ ನಡೆಯಲಿರುವ ರಾಜ್ಯಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್, ಹರ್ಯಾಣ, ಪಂಜಾಬ್, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರಾಖಂಡ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಚಂಡೀಗಢ ಸೇರಿವೆ.
ಜೊತೆಗೆ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು ಸೇರಿದಂತೆ ಕೆಲವು ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಅಭಿಯಾನ ಜಾರಿಯಾಗಲಿದೆ.
ಆದರೆ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಪ್ರದೇಶಗಳಲ್ಲಿ ಹವಾಮಾನ ಸಮಸ್ಯೆ ಮತ್ತು ಜನಗಣತಿ ಕಾರ್ಯಾಚರಣೆಗಳ ಕಾರಣದಿಂದ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಆಯೋಗ ತಿಳಿಸಿದೆ.
ಇದಕ್ಕೂ ಮುನ್ನ ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಹಾಗೂ ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿತ್ತು.
ಮೊದಲ ಎರಡು ಹಂತಗಳಲ್ಲಿ ಸುಮಾರು 59 ಕೋಟಿಗೂ ಹೆಚ್ಚು ಮತದಾರರ ಮಾಹಿತಿ ಪರಿಶೀಲನೆ ನಡೆಸಲಾಗಿತ್ತು ಎಂದು ಆಯೋಗ ಮಾಹಿತಿ ನೀಡಿದೆ.
ಇನ್ನೊಂದೆಡೆ, ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಕೆಲವು ರಾಜ್ಯಗಳಲ್ಲಿ ಪ್ರತಿಪಕ್ಷಗಳು ಈ ಪ್ರಕ್ರಿಯೆಯ ಬಗ್ಗೆ
ಅನುಮಾನ ವ್ಯಕ್ತಪಡಿಸಿದ್ದು, ಮತದಾರರ ಪಟ್ಟಿಯಿಂದ ನಿಜವಾದ ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ ಎಂದು ಆರೋಪಿಸಿವೆ.
ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ SIR ವಿಚಾರ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿಯೂ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಆದರೆ ಚುನಾವಣಾ ಆಯೋಗವು ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ಯಾವುದೇ ಅರ್ಹ ಮತದಾರರ ಹಕ್ಕು ಕಸಿಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕರಡು ಪಟ್ಟಿ ಪ್ರಕಟಣೆ, ಆಕ್ಷೇಪಣೆ ಸ್ವೀಕಾರ, ದೂರುಗಳ ಪರಿಶೀಲನೆ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಸೇರಿದಂತೆ ಹಲವು ಹಂತಗಳಲ್ಲಿ ಈ ಕಾರ್ಯ
ನಡೆಯಲಿದ್ದು, ಸಾರ್ವಜನಿಕ ಸಹಕಾರವೇ ಇದರ ಯಶಸ್ಸಿಗೆ ಪ್ರಮುಖ ಅಂಶ ಎಂದು ಆಯೋಗ ತಿಳಿಸಿದೆ.
ಇದನ್ನು ಓದಿ : https://vijayatimes.com/hijab-controversy-in-udupi/