• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯ: ಸಚಿವ ನಿತಿನ್ ಗಡ್ಕರಿ!

padma by padma
in ಪ್ರಮುಖ ಸುದ್ದಿ, ರಾಜಕೀಯ
ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯ: ಸಚಿವ ನಿತಿನ್ ಗಡ್ಕರಿ!
0
SHARES
0
VIEWS
Share on FacebookShare on Twitter

ನವದೆಹಲಿ,ಫೆ.20: ದಿನ ನಿತ್ಯ  ಡೀಸೆಲ್ ಪೆಟ್ರೋಲ್ ಇಂಧನ ಬೆಲೆಗಳು ಎಗ್ಗಿಲ್ಲದೆ ಏರುತ್ತಿದ್ದು ಕೊರೋನಾದಿಂದ ಈಗಾಗಲೇ ಜನಸಾಮಾನ್ಯರು ಆರ್ಥಿಕ ನಷ್ಟ ಅನುಭವಿಸುವ ಈ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿಸುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ದೆಹಲಿಯಲ್ಲಿರುವ ಎಲ್ಲ ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ ಮಾಡಲಾಗುವುದು ಎಂದು ಹೇಳಿದ್ದಾರೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಸಚಿವ ಗಡ್ಕರಿ, ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಬೇಕು. ಈ ಅಭಿಯಾನವನ್ನು ತಮ್ಮ ಇಲಾಖೆಯಿಂದಲೇ ಆರಂಭಿಸುವುದಾಗಿ ಹೇಳಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಘೋಷಣೆ ಮಾಡಿದ್ದಾರೆ. ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರಿಗೆ ಸಲಹೆ ನೀಡಿದ ನಿತಿನ್ ಗಡ್ಕರಿ, ತಮ್ಮ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ, ‘ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವಂತೆ ಅವರು ಸಲಹೆ ನೀಡಿದರು. ಒಂದು ಲೆಕ್ಕಾಚಾರದ ಪ್ರಕಾರ, ದೆಹಲಿಯಲ್ಲಿ 10,000 ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಸುಮಾರು 30 ಕೋಟಿ ರೂಪಾಯಿಯಷ್ಟು ಉಳಿತಾಯವಾಗಬಹುದು. ಎಲೆಕ್ಟ್ರಿಕ್ ಅಡುಗೆ ಉಪಕರಣಗಳನ್ನು ಬಳಸುವುದರಿಂದ ಆಮದು ಮಾಡಿದ ಅಡುಗೆ ಅನಿಲ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಬಹುದು ಎಂದು ಹೇಳಿದರು.

ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಚಿವರು ಸಲಹೆ ನೀಡಿದರು. ನಾವು ವಿದ್ಯುತ್ ಉಪಕರಣಗಳಿಗೆ ಏಕೆ ಸಬ್ಸಿಡಿ ಕೊಡಬಾರದು? ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.