Bengaluru: ಹೊಸ ವರ್ಷಾರಂಭದಲ್ಲೇ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (Karnataka Electricity Regulatory Commission) ವಿದ್ಯುತ್ ಶುಲ್ಕ ಕಡಿಮೆ ಮಾಡುವ ಮೂಲಕ ವಿದ್ಯುತ್ ಬಳಕೆದಾರರಿಗೆ ಸಂತಸದ ಸುದ್ದಿ ನೀಡಿದೆ.
ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಿರುವ ಬೆನ್ನಲ್ಲೇ ಕೆಇಆರ್ಸಿ (KERC) ವಿದ್ಯುತ್ ದರ ಕಡಿತಗೊಳಿಸಿದ್ದು, ಪ್ರಸಕ್ತ ಜನವರಿ ತಿಂಗಳಲ್ಲಿ ವಿದ್ಯುತ್ ಬಿಲ್ ಸರಿದೂಗಿಸುವಂತೆ ಕಡಿಮೆಯಾಗಲಿದೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಸೂಚನೆ ನೀಡಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.
ಕೆಇಆರ್ಸಿ ಸೂಚನೆ ಅನ್ವಯ ಬೆಸ್ಕಾಂ (BESCOM) ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 37 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 31 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ 3 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 51 ಪೈಸೆ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 39 ಪೈಸೆ ಕಡಿಮೆಯಾಗಲಿದೆ ಎಂದು ಮೂಲಗಳು ಹೇಳಿವೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಆಘಾತ ನೀಡಿತ್ತು. 2023 ಸೆಪ್ಟೆಂಬರ್ನಲ್ಲಿ ಪ್ರತಿ ಯೂನಿಟ್ ವಿದ್ಯುತ್ಗೆ 1.15 ರೂಪಾಯಿ ಹೆಚ್ಚಳ ಮಾಡಿತ್ತು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳೊಲ್ಲೊಂದಾದ ಗೃಹಜ್ಯೋತಿ (Gruhajyothi) ಯೋಜನೆಯನ್ನು ಬಹುತೇಕ ಕಡೆಗಳಲ್ಲಿ ಅಳವಡಿಸಿಕೊಂಡಿದ್ದು, 200 ಯುನಿಟ್ವರೆಗೂ ವಿದ್ಯುತ್ ಉಚಿತವಿದ್ದು, ಈ ಹಿನ್ನೆಲೆ ವಿದ್ಯುತ್ ದರ ಏರಿಕೆ ಇಳಿಕೆಯಲ್ಲಿ ಜನ ಸಾಮಾನ್ಯರ ಜೀವನದ ಮೇಲೆ ಹೆಚ್ಚಿನ ವ್ಯತ್ಯಯ ಉಂಟಾಗುವುದಿಲ್ಲ.
ಎಷ್ಟು ದರ ಇಳಿಕೆ?
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 37 ಪೈಸೆ,
ಮೆಸ್ಕಾಂ (MESCOM) ವ್ಯಾಪ್ತಿಯಲ್ಲಿ 31 ಪೈಸೆ,
ಹೆಸ್ಕಾಂ ವ್ಯಾಪ್ತಿಯಲ್ಲಿ 3 ಪೈಸೆ,
ಜೆಸ್ಕಾಂ ವ್ಯಾಪ್ತಿಯಲ್ಲಿ 51 ಪೈಸೆ
ಸೆಸ್ಕ್ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 39 ಪೈಸೆ ಕಡಿಮೆಯಾಗಲಿದೆ ಎಂದು ಮೂಲಗಳು ಹೇಳಿವೆ.
ರಾಜ್ಯದಲ್ಲಿ ಹೆಚ್ಚಾದ ಸೈಬರ್ ಕ್ರೈಂ ಪ್ರಕರಣಗಳು
Mysore: ಕರ್ನಾಟಕ (Karnataka) ದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಸೈಬರ್ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಯಾದ ಪ್ರಕರಣಗಳ ಸಂಖ್ಯೆ ಶೇ. 0.12 ಮಾತ್ರ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 40ಸಾವಿರಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಸೈಬರ್ (Cyber) ವಂಚಕರು ಸಿಕ್ಕಿ, ಶಿಕ್ಷೆಯಾಗಿರುವ ಪ್ರಕರಣಗಳ ಸಂಖ್ಯೆ ಕೇವಲ 51.
ಬೆಂಗಳೂರಿನಲ್ಲಿಯೇ (Bengaluru) ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರ, ಮೈಸೂರು ನಗರ, ಮಂಗಳೂರು (Mangalore), ಹುಬ್ಬಳ್ಳಿ – ಧಾರವಾಡ ನಗರದಲ್ಲಿ ನೂರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ದಾಖಲಾದ ವಂಚನೆ ಪ್ರಕರಣಗಳಲ್ಲಿ ಶೇ. 90ರಷ್ಟು ಪತ್ತೆಯಾಗದಿದ್ದ ಕಾರಣ ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಭವ್ಯಶ್ರೀ ಆರ್ ಜೆ