• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಲ್ಲಾ ಎಪಿಎಂಸಿ ವೈಶಿಷ್ಟ್ಯಗಳ ಕಿರುಚಿತ್ರ; ಸಚಿವ ಎಸ್.ಟಿ. ಸೋಮಶೇಖರ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಎಲ್ಲಾ ಎಪಿಎಂಸಿ ವೈಶಿಷ್ಟ್ಯಗಳ ಕಿರುಚಿತ್ರ; ಸಚಿವ ಎಸ್.ಟಿ. ಸೋಮಶೇಖರ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 28: ಎಪಿಎಂಸಿ ಮಹತ್ವ ಏನು..? ಯಾವ ಯಾವ ಎಪಿಎಂಸಿಗಳು ಯಾವುದಕ್ಕೆ ಪ್ರಖ್ಯಾತಿ ಪಡೆದಿದೆ…? ಅಲ್ಲಿಗೆ ಬರುವ ಪ್ರಮುಖ ಉತ್ಪನ್ನಗಳು ಯಾವುವು..? ಅವು ಯಾವ ಯಾವ ಕಡೆ ರಫ್ತಾಗುತ್ತದೆ.? ಯಾವ ಕಾರಣಕ್ಕೆ ಉಪಯೋಗವಾಗುತ್ತದೆ ಎಂಬಿತ್ಯಾದಿ ಮಾಹಿತಿಗಳುಳ್ಳ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಕೃಷಿ ಮಾರಾಟ ಮಂಡಳಿ ಪ್ರಧಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಎಲ್ಲ ಎಪಿಎಂಸಿಗಳಿಗೆ ಭೇಟಿ ನೀಡಿ ಅವುಗಳ ಸಾಧನೆ ಬಗ್ಗೆ, ಅಲ್ಲಿನ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಿ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುವುದು. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು, ಸದಾನಂದ ಗೌಡ ಅವರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಆಗುವ ಅನುಕೂಲಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ನೀಡಲಾಗಿದೆ. ಇನ್ನು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ರೈತರಿಗೆ ಅರಿವು ಮೂಡಿಸಲಾಗುವುದು. ಇದಕ್ಕೋಸ್ಕರವೇ ಕಿರುಚಿತ್ರ ನಿರ್ಮಾಣ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ಬದಲಾವಣೆಗೂ ಸರ್ಕಾರ ಬದ್ಧವಾಗಿದೆ. ಎಪಿಎಂಸಿ ಒಳಗೆ ಹಾಗೂ ಹೊರಗೆ ಮಾರಾಟ ಮಾಡಲು ಏಕರೂಪ ನೀತಿ ಅಳವಡಿಸುವ ಬಗ್ಗೆ ಚಿಂತನೆ ಮಾಡುತ್ತೇವೆ. ಇನ್ನು ಎಲ್ಲ 162 ಎಪಿಎಂಸಿಗಳಿಗೂ ನಾನು ಭೇಟಿ ನೀಡಿ ಅವಹಾಲುಗಳನ್ನು ಆಲಿಸಲಿದ್ದೇನೆ. ಈಗಿರುವ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು? ಯಾವ ಬದಲಾವಣೆಗಳನ್ನು ತಂದರೆ ಏನು ಮಾಡಬಹುದು? ಅಧಿಕಾರ ವಿಕೇಂದ್ರೀಕರಣ ಮಾಡಿ ಸ್ಥಳೀಯವಾಗಿ ಯಾವ ರೀತಿ ಅಧಿಕಾರ ನೀಡಬಹುದು ಎಂಬುದರ ಬಗ್ಗೆ ಗಮನಹರಿಸುತ್ತೇನೆ ಎಂದು ಭರವಸೆ ನೀಡಿದರು.

ಎಪಿಎಂಸಿ ವ್ಯವಸ್ಥೆ ಬಹಳ ದೊಡ್ಡದು. ಇದನ್ನು ದುರ್ಬಲಗೊಳಿಸುವುದು ಹಾಗೂ ಮುಚ್ಚುವುದು ಸರ್ಕಾರದ ಉದ್ದೇಶವಿಲ್ಲ. ಎಪಿಎಂಸಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾಗೂ ನಾನು ಇರುವವರೆಗೂ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

ಹಾಲಿ ಎಪಿಎಂಸಿಯಲ್ಲಿ ವಹಿವಾಟು ನಡೆಸಿದರೆ 60 ಪೈಸೆ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ದೊರೆತಿದೆ. ಇನ್ನು ಕೇಂದ್ರ ಸರ್ಕಾರ ಮಾರ್ಗಸೂಚಿ 10 ದಿನಗಳಲ್ಲಿ ಬರುವ ಸಾಧ್ಯತೆ ಇದ್ದು, ಅದು ಬಂದ ಮೇಲೆ ಎಪಿಎಂಸಿ ಹೊರಗೂ ಸಹ 60 ಪೈಸೆ ಶುಲ್ಕ ವಿಧಿಸುವ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ.‌

ಈ ಸಂದರ್ಭದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಎಪಿಎಂಸಿ ನಿರ್ದೇಶಕರಾದ ಕರಿಗೌಡ ಸೇರಿದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ಸದಸ್ಯರು ಭಾಗವಹಿಸಿದ್ದರು.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.