ವಿದ್ಯುತ್ ಬಿಲ್ ತಿದ್ದುಪಡಿ ಮೂವರ ಬಂಧನ

ಕೋಲಾರ ಸೆ 4 : ವಿದ್ಯುತ್ ಬಿಲ್ ತಿದ್ದುಪಡಿ ಮಾಡಿ ಅಕ್ರಮ ಎಸಗಿದ್ದ ಮೂವರು ನೌಕರರನ್ನು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರತಿ ತಿಂಗಳು ಬಿಲ್ ಮಾಡುವಾಗ ಬೆಸ್ಕಾಂಗೆ ನಷ್ಠವನ್ನುಂಟು ಮಾಡಿದ ಆರೋಪದ ಮೇಲೆ ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕರಾದ ಸುಜಾತಮ್ಮ, ಗಾಯತ್ರಮ್ಮ ಹಾಗೂ ಮೆಹಬೂಬ್ ಪಾಷ ಅವರನ್ನು ಅವರನ್ನು ಅಮಾನತುಗೊಳಿಸಲಾಗಿದೆ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್‌ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್‌ ಮೊತ್ತವನ್ನು ಕಡಿಮೆ ಮಾಡಿದ್ದಾರೆ. ಜೊತೆಗೆ 8 ಆರ್ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿದೆ. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

Exit mobile version