ನಾನು ದೂರದೃಷ್ಟಿ ಹೊಂದಿರುವ ಶ್ರೇಷ್ಟ ಆಡಳಿತಗಾರ ಸರ್ ಎಂ ವಿಶ್ವೇಶ್ವರಯ್ಯ (Sir M vishweshwaraiah) ಅವರಿಗೆ ಗೌರವ ಸಲ್ಲಿಸುತ್ತೇನೆ. ಸಂಶೋಧನೆ ಮತ್ತು ದೇಶ ಸೇವೆಯಲ್ಲಿ ತಲೆತಲಾಂತರದವರೆಗೆ ವಿಶ್ವೇಶ್ವರಯ್ಯನವರು ಸ್ಫೂರ್ತಿಯಾಗುತ್ತಾರೆ ಎಂದು ಪ್ರಧಾನಿ ಮೋದಿ ಎಂಜಿನಿಯರ್ ಗಳ ದಿನದ ಶುಭಾಶಯ ಕೋರುವ ಸಂದರ್ಭದಲ್ಲಿ ತಿಳಿಸಿದರು.

ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿಯವರು ಚಿಕ್ಕಬಳ್ಳಾಪುರಕ್ಕೆ (Chikkaballapura) ಭೇಟಿ ನೀಡಿದ್ದ ಸಮಯದಲ್ಲಿ ವಿಶ್ವೇಶ್ವರಯ್ಯನವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ರಾಷ್ಟ್ರಾದ್ಯಂತ ಇಂದು (ಸೆಪ್ಟೆಂಬರ್ 15) ಎಂಜಿನಿಯರ್ ಗಳ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಭಾರತದ ಮಹಾನ್ ಎಂಜಿನಿಯರ್ (Engineer) ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ (Engineer’s Day) ಎಂದು ಆಚರಿಸಲಾಗುತ್ತದೆ. ಪ್ರತಿವರ್ಷ ಸೆ. ೧೫ ರಂದು ಇಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಕೊಡುಗೆಯ ಗಮನಾರ್ಹವಾದುದ್ದು.
ಸರ್. ಎಂ ವಿಶ್ವೇಶ್ವರಯ್ಯ ಅವರ ಕೊಡುಗೆಯು ಭಾರತದಲ್ಲಿ ಅಣೆಕಟ್ಟು, ಜಲಾಶಯ ಮತ್ತು ಜಲವಿದ್ಯುತ್ ಯೋಜನೆಗಳ ನಿರ್ಮಾಣದಲ್ಲಿ ಅಪಾರವಾಗಿದೆ ಹಾಗಾಗಿ ಸರ್.ಎಂ ವಿಶ್ವೇಶ್ವರಯ್ಯ ಅವರನ್ನು ಮಹಾನ್ ರಾಷ್ಟ್ರ ನಿರ್ಮಾಪಕರಲ್ಲಿ ಒಬ್ಬರೆಂದು ಭಾರತದ ಮಹಾನ್ ಇಂಜಿನಿಯರ್ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ.

ಭಾರತ ಸರ್ಕಾರವು 1968 ರಲ್ಲಿ ವಿಶ್ವಕಂಡ ಮಹಾನ್ ಇಂಜಿನಿಯರ್, ಭಾರತ ರತ್ನ , ಕನ್ನಂಬಾಡಿಯ ಶಿಲ್ಪಿವನ್ನು ಇಂಜಿನಿಯರ್ಸ್ ದಿನ ಎಂದು ಆಚರಣೆ ಮಾಡುವಂತೆ ಘೋಷಣೆ ಮಾಡಿತು. ಅಂದಿನಿಂದ ಪ್ರತಿ ವರ್ಷವು ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನ ಆಚರಣೆ ಮಾಡಲಾಗುತ್ತಿದೆ.
ವಿಶ್ವೇಶ್ವರಯ್ಯನವರು ಕರ್ನಾಟಕ (Karnataka) ಜಿಲ್ಲೆಯ ಮುದ್ದೇನಹಳ್ಳಿ ಎಂಬ ಹಳ್ಳಿಯಲ್ಲಿ 15 ಸೆಪ್ಟೆಂಬರ್ 1860 ರಂದು ಜನಿಸಿದರು. ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಲು ಶ್ರಮಿಸುತ್ತಿರುವ ಎಲ್ಲಾ ಇಂಜಿನಿಯರ್ಗಳನ್ನು ಗೌರವಿಸಲು ಮತ್ತು ಗುರುತಿಸಲು ಈ ದಿನವನ್ನು ಇಂಜಿನಿಯರ್ಸ್ ಡೇ ಎಂದು ಆಚರಿಸಲಾಗುತ್ತದೆ.
ಅವರ ಯೋಜನೆಗಳು ಒಂದೆರೆಡಲ್ಲ, ಕರ್ನಾಟಕದ ಕೃಷ್ಣ ರಾಜ ಸಾಗರ ಅಣೆಕಟ್ಟು ಮತ್ತು ಹೈದರಾಬಾದ್ನ (Hyderabad) ಪ್ರವಾಹ ರಕ್ಷಣಾ ವ್ಯವಸ್ಥೆ ಹೀಗೆ ಹಲವಾರು. ಪುಣೆ ಕಾಲೇಜ್ ಆಫ್ ಇಂಜಿನಿಯರಿಂಗ್ನಿಂದ ಸಿವಿಲ್ (Civil) ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ ಅಲ್ಲದೆ ಅವರು ನೀರಾವರಿ ಮತ್ತು ಪ್ರವಾಹ ವಿಪತ್ತು ನಿರ್ವಹಣೆಯಲ್ಲಿ ಹೆಸರುವಾಸಿಯಾಗಿದ್ದಾರೆ.
ಭವ್ಯಶ್ರೀ ಆರ್.ಜೆ