ಅಫ್ಘಾನಿಸ್ತಾನ ಪ್ರಜೆಗಳಿಗೆ ಅಗತ್ಯ ನೆರವು – ಆರಗ ಜ್ಞಾನೇಂದ್ರ

ಬೆಂಗಳೂರು ಆ 18 : ರಾಜ್ಯದಲ್ಲಿ ನೆಲೆಸಿರುವ ಅಫ್ಘಾನ್ ಪ್ರಜೆಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ರಾಜ್ಯ ಪೊಲೀಸರು ಸುಮಾರು 30 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಅದರ ವೀಕ್ಷಣೆಗೆ ಬಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಬೆಂಗಳೂರು ನಗರದಲ್ಲಿ ಸುಮಾರು 339 ಮಂದಿ ಆಫ್ಘಾನ್ ಪ್ರಜೆಗಳಿದ್ದಾರೆ ಅವರಿಗೆ ಸರ್ಕಾರದಿಂದ ಎಲ್ಲಾ ಅಗತ್ಯ ನೆರವನ್ನು ನೀಡಲಾಗುವುದು. ಅವರು ಪ್ರಸ್ತುತ ಅಸಹಾಯಕರಾಗಿದ್ದಾರೆ. ಅವರ ವೀಸಾ ಆವಧಿ ವಿಸ್ತಾರದ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆ  ಎಂದರು.

ಈ ಬಗ್ಗೆ ಪೊಲೀಸ್ ಆಯಕ್ತ ಕಮಲ್ ಪಂತ್ ಮಾತನಾಡಿ ಅಫ್ಘಾನ್ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇದ್ದರೆ  ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಲಿ ಯಾವುದೇ ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಕೂಡ ಸರಿಪಡಿಸುತ್ತೇವೆ ಮತ್ತು ಅವರ ಜೊತೆ ನಾವಿದ್ದೇವೆ ಎಂದು ಅವರು ತಿಳಿಸಿದರು.

Exit mobile version