• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾ ಆತಂಕ: ಸಂಕಷ್ಟದಲ್ಲಿರುವವರಿಗೆ ನೆರವಾಗಿ: ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ: ಸಿದ್ದರಾಮಯ್ಯ ಟೀಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 24: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗೆ ನೆರವಾಗುವಂತೆ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

ಈ ಸಂಬಂಧ ಕಾಂಗ್ರೆಸ್‌ ಶಾಸಕರಿಗೆ ಸೂಚಿಸಿರುವ ಸಿದ್ಧರಾಮಯ್ಯ, ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ.  ಈ ಸಂದರ್ಭದಲ್ಲಿ  ಭ್ರಷ್ಟ, ಬೇಜವಾಬ್ದಾರಿ, ಅಧ್ಯಕ್ಷ ಮತ್ತು ಜನವಿರೋಧಿ ಸ್ವಭಾವದ ಬಿಜೆಪಿ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು.  ಸದರಿ ವರದಿಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. 

ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ‘ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಮಹಾಮಾರಿ ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು

ಆ ಸಂಧರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು  ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೆ ಬಂದರು. ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು.’  ಸಮರ್ಪಕವಾಗಿ ಟೆಸ್ಟ್‍ಗಳನ್ನೂ ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‍ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರುಗಳ ಕೈಗೆ ಸಿಗುತ್ತಿಲ್ಲ.  ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೆ  ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ  ಲ್ಯಾಬ್ ಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್‍ ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧಿಗಳು ಇತ್ಯಾದಿಯಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರೆ ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು.  ಈ ಸಿದ್ದತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ.

ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿ.ಜೆ.ಪಿ. ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ.  ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೆ ಅನ್ಯ ದಾರಿ ಇಲ್ಲ.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿ.ಜೆ.ಪಿ. ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಾಶರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ ಶಾಹಿ ಆಡಳಿತವನ್ನೇ ಬಿ.ಜೆ.ಪಿ. ಸರ್ಕಾರ ಈಗಲೂ ಮಾಡುತ್ತಿದೆ.  ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜ್ ಮಾಡಿ ಓಡಿಸುವುದು, ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು ಮತ್ತು ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು.  ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ.  ಇಂದಿರಾ ಕ್ಯಾಂಟಿನ್‍ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.  ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ.  ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೆ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ ಎಂದು ಸಿದ್ಧರಾಮಯ್ಯ ಟೀಕಿಸಿದರು.

ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಕಳೆದ ಬಾರಿ ಜನರ ಜೊತೆ ನಿಂತು ಅನ್ನ, ಆಹಾರದ ವ್ಯವಸ್ಥೆಯನ್ನು ಮಾಡಲು ಸಾಕಷ್ಟು ಶ್ರಮಿಸಿದ್ದೀರಿ. ಹಾಗೆಯೇ ರೈತರು ಬೆಳೆದ ತರಕಾರಿ, ಹಣ್ಣು ಇತರೆ ಉತ್ಪನ್ನಗಳನ್ನು  ಖರೀದಿಸಿ, ಜನರಿಗೆ ತಲುಪಿಸುವ ಸ್ತುತ್ಯಾರ್ಹವಾದ ಕೆಲಸಗಳನ್ನು ಮಾಡಿದ್ದೀರಿ.  ಇವೆಲ್ಲವನ್ನು ಜನತೆ ಕೃತಜ್ಞತೆಯಿಂದ ನೆನೆಸುತ್ತಿದ್ದಾರೆ.

ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪವನ್ನು ತಳೆಯುತ್ತಿರುವ ಈ ಸಂದರ್ಭದಲ್ಲೂ ಸಹ ತಾವುಗಳು ಜನರ ಜೊತೆ ನಿಂತು, ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್‍ಗಳು, ಇನ್ನಿತರ ಚಿಕಿತ್ಸೆಗಳಿಗೆ ನೆರವಾಗಬೇಕೆಂದು ಹಾಗೂ  ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಸಹ ಕಳೆದ ವರ್ಷದಂತೆಯೇ ಈ ವರ್ಷವೂ ಮಾಡುವ ಮೂಲಕ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕು ಎಂದು ಕಾಂಗ್ರೆಸ್ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.