• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಮಲತಾ ವಿರುದ್ಧ ಮಾಜಿ ಸಂಸದ ಶಿವರಾಮೇಗೌಡ ವಾಗ್ದಾಳಿ: ಯಾವುದಾದರೂ ಪಕ್ಷ ಸೇರುವಂತೆ ಸಂಸದೆಗೆ ಸಲಹೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸುಮಲತಾ ವಿರುದ್ಧ ಮಾಜಿ ಸಂಸದ ಶಿವರಾಮೇಗೌಡ ವಾಗ್ದಾಳಿ: ಯಾವುದಾದರೂ ಪಕ್ಷ ಸೇರುವಂತೆ ಸಂಸದೆಗೆ ಸಲಹೆ
0
SHARES
0
VIEWS
Share on FacebookShare on Twitter

ಮಂಡ್ಯ, ಜು. 10: ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮುಂಬರುವ ಜಿ.ಪಂ ಚುನಾವಣೆಗೆ ಸ್ವಾಭಿಮಾನದ ಅಭ್ಯರ್ಥಿಗಳನ್ನ ಹಾಕಲಿ, ಇದು ಚಾಲೆಂಜ್ ಎಂದು ಸಮಲತಾಗೆ ಸವಾಲು ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಸಂಸದೆ
ಸುಮಲತಾಗೆ ಸರಿಯಾದ ಅಡ್ವೈಸರ್ ಇಲ್ಲ. ಅವರು ಒಂದು ಪಕ್ಷಕ್ಕೆ ಸೇರಿಕೊಳ್ಳಲಿ, ಬಿಜೆಪಿ ಇಲ್ಲ ಕಾಂಗ್ರೆಸ್ ಯಾವುದಾದರು ಸೇರಲಿ.
ಯಾವ ಪಕ್ಷವನ್ನು ಸೇರದಿದ್ರೆ ವಾಟ್ ನೆಕ್ಟ್? ಎಂದು ಪ್ರಶ್ನೆ ಮಾಡಿರುವ ಅವರು, ಮಂಡ್ಯ ಜನರು ದಡ್ಡರಲ್ಲ, ಒಂದು ಸಲ ಯಮಾರಿಸಿದ್ದೀರಾ, ಜನ ಮತ್ತೆ ಯಮಾರಲ್ಲ. ಯಾವುದಾದರೂ ಒಂದು ಪಕ್ಷ ಸೇರಿ ಆಗ ಅಲ್ಲಿನ‌ ಮುಖಂಡರಾದರು ನಿಮ್ಮ ಜೊತೆ ಬರ್ತಾರೆ ಎಂದು ಸುಮಲತಾಗೆ ರಾಜಕೀಯ ಕಿವಿಮಾತು ಹೇಳಿದರು.

ಮಂಡ್ಯ ಪಾಲಿಟಿಕ್ಸ್‌ನಲ್ಲಿ ಸುಮಲತಾ ಬಿಗ್ ಜೀರೋ, ಆಕೆ ಬಗ್ಗೆ ಮಾತನಾಡದಂತೆ ನಮ್ಮ ನಾಯಕರಲ್ಲಿ ಮನವಿ ಮಾಡ್ತೀನಿ. ದೊಡ್ಡ ಸೊನ್ನೆ ಇರುವಾಗ ಅಂಬರೀಶ್ ಹೆಸರೇಳಿಕೊಂಡು ಯಾರ್ರಿ ಹೋದವ್ರು? ಅಂಬರೀಶ್ ಗುಣವೇ ಬೇರೆ, ಸುಮಲತಾ ಗುಣವೇ ಬೇರೆ. ಅಂಬರೀಶ್ ಪತ್ನಿ ಎಂದು ಹೈಜಾಕ್ ಮಾಡಿ ಮಂಡ್ಯ ಜನರ ಮನಸ್ಸು ಗೆದ್ದಿದ್ದಾರೆ ಅಷ್ಟೇ ಎಂದು ಸಂಸದೆ ಸಮಲತಾ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ಕಾಲದಲ್ಲೂ ಗಣಿ ನಡೆಯುತ್ತಿತ್ತು ಅಲ್ವಾ? ಆಗ ಯಾಕೆ ಇಯಮ್ಮ ನಿಲ್ಲಿಸಲಿಲ್ಲ. ಮಂಡ್ಯ ಜಿಲ್ಲೆಯಿಂದ ಹೋದವರಿಗೆ ಕಾಫಿ ಬೇಡ, ನೀವು ಒಂದು ಲೋಟ ನೀರು ಕೊಟ್ಟಿದ್ದರೆ ಸಾಕಾಗಿತ್ತು.
ಮಂಡ್ಯ ಜನಕ್ಕೆ ಎಲ್ಲವೂ ಗೊತ್ತಿದೆ, ಹಾಗಾಗಿ ಇದನ್ನ ಇಲ್ಲಿಗೆ ಬಿಡಿ. ಜೆಡಿಎಸ್ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದರು.

ಸುಮಲತಾರನ್ನ ಜನ ಆಗಲೇ ಮರೆತಿದ್ರು, ಆದ್ರೆ ನಮ್ಮ ನಾಯಕರೇ ಮಾತನಾಡಿ ಮತ್ತೆ ನೆನಪಿಸಿದ್ರು. ಅಂಬರೀಶ್ ಸತ್ತಾಗ ಮಂಡ್ಯಕ್ಕೆ ಮೃತದೇಹ ತೆಗೆದುಕೊಂಡು ಹೋಗೋದು ಬೇಡ ಅಂತ ಈಯಮ್ಮ ಹೇಳಿದ್ರು. ಆದ್ರೆ ಕುಮಾರಸ್ವಾಮಿ ಮಂಡ್ಯಕ್ಕೆ ತಂದ್ರು, ರಾಜ್‌ಕುಮಾರ್ ಪಕ್ಕದಲ್ಲೇ ಅಂಬಿ ಇರಬೇಕು ಅಂತ ಸಮಾಧಿಗೆ ಜಾಗ ಕೊಟ್ರು.
ಸುಮಲತಾ ಆಂಧ್ರಕ್ಕೂ ಮಂಚವಾಡು ಅನಂತುಡು ಅಂದಂಗೆ ಅವರು ಅನಂತಪುರದವರು.
ಅಂಬರೀಶ್ ಮದ್ವೆ ಆಗಿ ಬಂದಮೇಲೆ ಅವರ ಧರ್ಮ‌ಪತ್ನಿ ಅಂತ ಸ್ವೀಕಾರ ಮಾಡಿದ್ದೇವೆ.
ಅಷ್ಟು ಬಿಟ್ರೆ ಬೇರೇನು ಇಲ್ಲಾ ಎನ್ನುವುದರ ಮೂಲಕ ಮತ್ತೆ ಸುಮಲತಾ ಮೂಲ‌ ಪ್ರಶ್ನಿಸಿದರು.

ಸಿನೆಮಾ ರೀತಿಯಲ್ಲೇ ಸಂಸದೆ ಆಗಿಯೂ ಸುಮಲತಾ ನಟನೆ ಮಾಡ್ತಿದ್ದಾರೆ. ಕರ್ಣ ಎಂದು ಹೆಸರು ಪಡೆದಿರುವ ಅಂಬರೀಶ್‌ ಅವರ ಕೊಡುಗೆಯೂ ಮಂಡ್ಯಕ್ಕೆ ಶೂನ್ಯ. ಸಂಸದೆ ಸುಮಲತಾ ಕೊರೊನಾ ಕಾಲದಲ್ಲಿ ಏನು ಮಾಡಿದ್ದಾರೆ.? ಎಂದು ಪ್ರಶ್ನಿಸಿದರು.

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.