Delhi: ರೈತರೇ ದೇಶದ ಬೆನ್ನೆಲಬು ಎಂಬುದು ಹೇಳಿಕೆಗೆ ಮಾತ್ರ ಸೀಮಿತವಾಗಬಾರದು (Farmer Protest Highlights) ಎನ್ನುತ್ತ ದೇಶದ ಅನ್ನದಾತರು ಇಂದು ಮತ್ತೆ ಕೇಂದ್ರ
ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಚಲೋ (Delhi Chalo) ಪ್ರತಿಭಟನೆಗೆ ದೇಶದ ನಾನಾ ರೈತ ಸಂಘಟನೆಗಳಿಗೆ ಕರೆ ನೀಡಲಾಗಿದ್ದು ವಿವಿಧ ಬೇಡಿಕೆಗಳ
ಈಡೇರಿಕೆಗೆ (Farmer Protest Highlights) ಒತ್ತಾಯಿಸಲಾಗಿದೆ.
ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ಅನ್ನದಾತರು ‘ದೆಹಲಿ ಚಲೋ’ಪ್ರತಿಭಟನೆ ಮಾಡಲು ರಾಷ್ಟ್ರ ರಾಜಧಾನಿಯತ್ತ ದಾಂಗುಡಿ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ
ಮೋದಿ (Narendra Modi) ನೇತೃತ್ವ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾನೂನು ಜಾರಿ ಸೇರಿ ಹಲವು ಬೇಡಿಕೆಗಳ
ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ (Kisan Morcha) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋಗೆ ಕರೆ ನೀಡಿವೆ. ಇದಕ್ಕೆ ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು
ಬೆಂಬಲ ಸೂಚಿಸಿದ್ದು, ಇಂದು ಲಕ್ಷಾಂತರ ರೈತರು ದೆಹಲಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆ ಸಿಂಘು, ಘಾಜಿಪುರ್, ಟಿಕ್ರಿ ಗಡಿಯಲ್ಲಿ ಸಂಚಾರ ನಿರ್ಬಂಧಿಸಿರುವ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಬೃಹತ್ ಗಾತ್ರದ ಬ್ಯಾರಿಕೇಡ್, ಕಾಂಕ್ರಿಟ್
(Barricade, Concrete) ಗೋಡೆ ನಿರ್ಮಿಸಿದ್ದಾರೆ. ರಸ್ತೆಯಲ್ಲಿ ಕಬ್ಬಿಣದ ಚೂಪಾದ ರಾಡ್ಗಳನ್ನು ಹಾಕಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಿ ದೆಹಲಿ ಸುತ್ತಲೂ ಪೊಲೀಸರು
ಸುತ್ತುವರೆದಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ನ ಹಲವಾರು ರೈತ ಸಂಘಗಳು ತಮ್ಮ ಉತ್ಪನ್ನಗಳಿಗೆ ಎಂಎಸ್ಪಿಯನ್ನು (MSP) ಖಾತರಿಪಡಿಸುವ ಕಾನೂನನ್ನು ತರಲು ಒತ್ತಾಯಿಸಿ
ಮೆರವಣಿಗೆಗೆ ಕರೆ ನೀಡಿವೆ. ಸೋನಿಪತ್, ಪಾಣಿಪತ್, ಕರ್ನಾಲ್ ಕಡೆಗೆ ಹೋಗುವ ಬಸ್ಸುಗಳು ಈ ಮಾರ್ಗದ ಮೂಲಕ ಹಾದು ಹೋಗುತ್ತವೆ. ಹೀಗಾಗಿ ಈ ಮಾರ್ಗಗಳನ್ನು ಪೊಲೀಸರು
ಬಂದ್ ಮಾಡಿದ್ದು ಬ್ಯಾರಿಕೇಡ್ ಮೂಲಕ ಭದ್ರಕೋಟೆ ನಿರ್ಮಿಸಿದ್ದಾರೆ.
ದೆಹಲಿಯಲ್ಲಿ (Delhi) ಪೊಲೀಸರು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು. ಒಂದುವೇಳೆ ರೈತರು ಉದ್ವಿಗ್ನಗೊಂಡ್ರೆ, ನಿಯಂತ್ರಣಕ್ಕಾಗಿ ಹರಿಯಾಣ ಗಡಿಯಲ್ಲಿ ತಾತ್ಕಾಲಿಕವಾಗಿ 2
ಜೈಲುಗಳನ್ನೇ (Jail) ನಿರ್ಮಿಸಲಾಗಿದೆ. ಆ್ಯಂಬುಲೆನ್ಸ್ಗಳಿಗೆ ಪರ್ಯಾಯ ಮಾರ್ಗಗಳನ್ನ ಸೂಚಿಸಲಾಗಿದೆ. ಹೋರಾಟದಲ್ಲಿ ಆಸ್ತಿ-ಪಾಸ್ತಿ ಹಾನಿಯಾದ್ರೆ ಹೋರಾಟಗಾರರೇ ಕಟ್ಟಬೇಕು
ಎಂದು ಹರಿಯಾಣ (Haryana) ಸರ್ಕಾರ ಎಚ್ಚರಿಸಿದೆ.