• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೊಸ ಆದಾಯ ತೆರಿಗೆ ವೆಬ್‌ಸೈಟ್‌ನ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಹೊಸ ಆದಾಯ ತೆರಿಗೆ ವೆಬ್‌ಸೈಟ್‌ನ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
0
SHARES
0
VIEWS
Share on FacebookShare on Twitter

ನವದೆಹಲಿ, ಜೂ. 08: ಆದಾಯ ತೆರಿಗೆ ಇಲಾಖೆ ಹೊಸ ಇ- ಫೈಲಿಂಗ್​ ವೆಬ್​ಸೈಟ್​ನಲ್ಲಿ ದೋಷ ಕಂಡು ಬಂದಿದೆ. ಇದರಿಂದ ತೆರಿಗೆದಾರರು ಸಮಸ್ಯೆ ಅನುಭವಿಸುವಂತೆ ಆಗಿದ್ದು, ಇದನ್ನು ಸರಿಪಡಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇನ್ಫೋಸಿಸ್​ ಮತ್ತು ನಂದನ್​ ನಿಲೇಕಣಿ ಅವರಿಗೆ ಟ್ಯಾಗ್​ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಸಮಸ್ಯೆ ಶೀಘ್ರದಲ್ಲಿಯೇ ಬಗೆಹರಿಯಲಿದ್ದು, ತೇರಿಗೆದಾರರನ್ನು ನಮ್ಮ ಸೇವೆ ಗುಣಮಟ್ಟದಲ್ಲಿ ನಿರಾಸೆಗೊಳಿಸುವುದಿಲ್ಲ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾರೆ.

ಹೊಸದಾಗಿ ಆರಂಭಗೊಂಡಿರುವ ಈ ಪೋರ್ಟ್​ಲ್​ನಲ್ಲಿ ಸಮಸ್ಯೆ ಕಂಡು ಬಂದ ತಕ್ಷಣ ಸೇವಾದಾರರು ಈ ಕುರಿತು ನಿರ್ಮಲಾ ಸೀತಾರಾಮನ್​ ಅವರ ಗಮನ ಸೆಳೆದಿದ್ದಾರೆ. ಈ ಕುರಿತು ಟ್ವೀಟ್​ ಮೂಲಕ ತಿಳಿಸಿರುವ ವಿತ್ತ ಸಚಿವರು, ಬಹುನಿರೀಕ್ಷಿತ ಇ ಫೈಲಿಂಗ್​ ಪೋರ್ಟಲ್​ 2.0 ಅನ್ನು ಕಳೆದ ರಾತ್ರಿ ಅಂದರೆ ಜೂನ್​ 7ರ ಸೋಮವಾರ ರಾತ್ರಿ 10-45ಕ್ಕೆ ಪ್ರಾರಂಭಿಸಲಾಗಿದೆ. ಈ ಪೋರ್ಟಲ್​ನ ಟೈಮ್​ಲೈನ್​ನಲ್ಲಿ ತೊಂದರೆಗಳು ಕಂಡು ಬರುತ್ತಿರುವುದನ್ನು ನಾನು ಗಮನಿಸಿದ್ದೇನೆ. ಈ ಸಮಸ್ಯೆಯನ್ನು ಶೀಘ್ರದಲ್ಲಿಯೇ ಐಟಿ ದಿಗ್ಗಜ ಇನ್ಫೋಸಿಸ್​ ಸಂಸ್ಥೆ ಮತ್ತು ನಂದನ್ ನಿಲೇಕಣಿ ಅವರು ಸರಿಮಾಡುವ ಭರವಸೆ ಹೊಂದಿದ್ದೇನೆ ಎಂದು ಅವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ನೂತನ ತೆರಿಗೆ ಪಾವತಿ ಪೋರ್ಟಲ್​ ತೆರಿಗೆದಾರರಿಗೆ ಅನುಕೂಲವಾಗುವಂತೆ ಹಲವು ಹೊಸ ಫೀಚರ್​ಗೊಳಿಂದಿಗೆ ನಿನ್ನೆ ಹೊಸ ಇ ಫೈಲಿಂಗ್​ ವೆಬ್​ ಸೈಲ್​ ಪ್ರಾರಂಭ ಮಾಡಲಾಗಿದೆ. ವೆಬ್​ಸೈಟ್​ ಲಾಂಚ್​ ಬಳಿಕ ಮಾತನಾಡಿದ ಅಧಿಕಾರಿಗಳು, ಹೊಸದಾಗಿ ಪ್ರಾರಂಭಗೊಂಡಿರುವ ವೆಬ್​ತಾಣ ಜನರ ಬಳಕೆಗೆ ಸರಾಗವಾಗುವ ಮುನ್ನ ಅದು ಸ್ಥಿರತೆ ಪಡೆಯಲು ಕೆಲ ಸಮಯ ಪಡೆಯಲಿದ್ದು, ಬಳಿಕ ಜನರು ಬಳಕೆಗೆ ಮುಂದಾಬಹುದು ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಇ ಆಡಳಿತದ ಯೋಜನೆ ಅಡಿ ಈ ಪೋರ್ಟಲ್​ ಅಭಿವೃದ್ಧಿ ಪಡಿಸಲಾಗಿದೆ. ತೆರಿಗೆದಾರರು ಮತ್ತು ಇತರ ಮಧ್ಯಸ್ಥಗಾರರಿಗೆ ಆದಾಯ ತೆರಿಗೆ ಸಂಬಂಧಿತ ಸೇವೆಗಳಿಗೆ ಒಂದೇ ವೇದಿಕೆ ಒದಗಿಸುವುದು ಈ ಪೋರ್ಟಲ್​ನ ಉದ್ದೇಶವಾಗಿದೆ. ಸೋಮವಾರ ಪ್ರಾರಂಭವಾಗಿರುವ ಸೆಂಟ್ರಲ್​ ಬೋರ್ಡ್​ ಆಫ್​ ಡೈರೆಕ್ಟ್​ ಟಾಕ್ಸ್​ (ಸಿಬಿಡಿಟಿ) ಮೂಲಕ ಜನರು ಆನ್​ಲೈನ್​ ತೆರಿಗೆ ಪಾವತಿ ಮಾಡಲು ಹಾಗೂ ಮೊಬೈಲ್​ ನಲ್ಲಿ ಈ ಅಪ್ಲಿಕೇಶನ್​ ಬಳಸಲು ಜೂ 18ರವರೆಗೆ ಕಾಯವೇಕು ಎಂದು ಅಧಿಕಾರಿಗಳು ತಿಳಿಸಿದ್ದರು.

ಹೆಚ್ಚಿನ ಬಳಕೆದಾರರ ಆಗಮನದಿಂದ ಸಮಸ್ಯೆ ಈ ಪೋರ್ಟಲ್​ ಆರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬಳಕೆದಾರರು ಆಗಮಿಸಿದ ಕಾರಣ ಈ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಏಕ ಕಾಲದಲ್ಲಿ ಹೆಚ್ಚಿನ ಜನರು ಈ ತಾಣಕ್ಕೆ ಭೇಟಿ ನೀಡಿದ ಪರಿಣಾಮ ಪೋರ್ಟಲ್​ನಲ್ಲಿ ಲೋಡ್​ ಮಾಡಲು ಹೆಚ್ಚಿನ ಸಮಯ ಪಡೆಯುತ್ತಿದೆ ಎಂದು ಕೆಲವರು ತಿಳಿಸಿದ್ದಾರೆ. ಶೀಘ್ರ ಮರುಪಾವತಿ ಆದಾಯ ತೆರಿಗೆ ರಿಟರ್ನ್ಸ್​​ ಅನ್ನು ಶೀಘ್ರ ಪ್ರಕ್ರಿಯೆಗಾಗಿ ಈ ಮರುಪಾವತಿ ಹೊಸ ಪೋರ್ಟ್​ಲ್​ ಅನ್ನು ಸಿದ್ದಪಡಿಸಲಾಗಿದೆ. ಈ ಮೂಲಕ ತೆರಿಗೆದಾರರರು ಮತ್ತು ಕೇಂದ್ರ ಮಂಡಳಿ ಎಲ್ಲಾ ಕಾರ್ಯಚಟುವಟಿಕೆಗಳು ಕುರಿತು ಒಂದೇ ಡ್ಯಾಶ್​ ಬೋರ್ಡ್​ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಇನ್ಫೋಸಿಸ್​ ಸಂಸ್ಥೆ 2017ರಲ್ಲಿ ಕೂಡ ಸರ್ಕಾರ ಜಿಎಸ್​ಟಿ ತೆರಿಗೆದಾರರು ಮತ್ತು ರಿಟನ್​ ಫೈಲಿಂಗ್​ಗಾಗಿ ಈ ಜಿಎಸ್​ಟಿಎನ್​ ​ ಪೋರ್ಟಲ್​ ಅನ್ನು ​ ಅಭಿವೃದ್ಧಿ ಪಡಿಸಿತು. ಈ ಸಂದರ್ಭದಲ್ಲಿ ಸಮಸ್ಯೆ ಕಂಡು ಬಂದು ತೊಂದರೆಯಾಗಿತ್ತು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.