• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತೈಲ ತೆರಿಗೆ ಹಣ ಎಲ್ಲೋಯ್ತು? ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಟ್ಟ ಸಚಿವೆ ನಿರ್ಮಲಾ ಸೀತಾರಾಮನ್!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
finance minister
0
SHARES
0
VIEWS
Share on FacebookShare on Twitter

ವಿಶ್ವದಾದ್ಯಂತ(Worldwide) ತೈಲ(Oil) ಬೆಲೆ ಏರಿಕೆ ಕಾಣುತ್ತಿದೆ. ರಷ್ಯಾ-ಉಕ್ರೇನ್(Russia-Ukraine) ಯುದ್ದ ಪ್ರಾರಂಭವಾದ ಪರಿಣಾಮ ತೈಲ ಬೆಲೆ ಮತ್ತಷ್ಟು ಹೆಚ್ಚಾಯಿತು. ಆದರೆ ಕೇಂದ್ರ ಸರ್ಕಾರ(Central Government) ಮಾತ್ರ ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಯಾವುದೇ ಸಬ್ಸಿಡಿಯನ್ನು ನೀಡಲಿಲ್ಲ. ಕೆಲ ತಿಂಗಳ ಹಿಂದೆ ಅಲ್ಪ ತೆರಿಗೆ ಇಳಿಕೆ ಮಾಡಿದ್ದರು ಕಳೆದೆರೆಡು ವಾರಗಳಿಂದ ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ.

ಹೀಗಾಗಿ ತೈಲ ತೆರಿಗೆ ಹಣವನ್ನು ಬಿಜೆಪಿ ಸರ್ಕಾರ ಏನು ಮಾಡುತ್ತಿದೆ? ಆ ಹಣವೆಲ್ಲಾ ಎಲ್ಲಿ ಹೋಯ್ತು? ಎಂದು ಪ್ರತಿಪಕ್ಷಗಳು ಬಿಜೆಪಿ ಸರ್ಕಾರವನ್ನು ಪ್ರಶ್ನಿಸುತ್ತಿವೆ. ಇದೀಗ ಕೇಂದ್ರ ಹಣಕಾಸು ಸಚಿವೆ(Finance Minister) ನಿರ್ಮಲಾ ಸೀತಾರಾಮನ್(Nirmala Sitharaman) ಈ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ತೈಲ ತೆರಿಗೆ ಹಣವನ್ನು ಎಲ್ಲೆಲ್ಲಿ ಖರ್ಚು ಮಾಡಲಾಗಿದೆ ಮತ್ತು ಈ ಹಿಂದೆ ಕಾಂಗ್ರೆಸ್ ಸರ್ಕಾರ ಎಷ್ಟು ಖರ್ಚು ಮಾಡಿತ್ತು ಎಂಬ ವಿವರಗಳನ್ನು ನಿರ್ಮಲಾ ಸೀತಾರಾಮನ್ ಅವರು ಟ್ವೀಟ್‍ರ್‍ನಲ್ಲಿ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಈ ಹಿಂದೆ ತೈಲ ಬಾಂಡ್ ಮೂಲಕ ಮಾಡಿದ್ದ ಸಾಲದಲ್ಲಿ 93 ಸಾವಿರ ಕೋಟಿ ರೂಪಾಯಿಗಳನ್ನು ಬಿಜೆಪಿ ಸರ್ಕಾರ ಮರುಪಾವತಿ ಮಾಡಿದೆ. 2026ರೊಳಗೆ 1.48 ಲಕ್ಷ ಕೋಟಿ ರೂಪಾಯಿಗಳನ್ನು ಮರುಪಾವತಿ ಮಾಡುವ ಗುರಿ ಹೊಂದಲಾಗಿದೆ. ಇದೇ ವೇಳೆಯಲ್ಲಿ ಬಿಜೆಪಿ ಸರ್ಕಾರ ತೈಲ ತೆರಿಗೆಯ ಬಹುಪಾಲು ಹಣವನ್ನು ಅಭಿವೃದ್ದಿ ಮತ್ತು ಬಂಡವಾಳ ನಿರ್ಮಾಣ ಕಾರ್ಯಗಳಿಗೆ ಉಪಯೋಗಿಸಿದೆ ಎಂದಿದ್ದಾರೆ.

ಕಳೆದ 8 ವರ್ಷಗಳಲ್ಲಿ ಅಭಿವೃದ್ದಿ ಯೋಜನೆಗಳಿಗಾಗಿ 91 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆದರೆ ಕಾಂಗ್ರೆಸ್ ಆಡಳಿತದ 10 ವರ್ಷಗಳಲ್ಲಿ 49.2 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು. ಸುಮಾರು ಎರಡು ಪಟ್ಟು ಹೆಚ್ಚಿನ ಹಣವನ್ನು ನಮ್ಮ ಸರ್ಕಾರ ಅಭಿವೃದ್ದಿಗೆ ವಿನಿಯೋಗಿಸಿದೆ. ಇನ್ನು 8 ವರ್ಷಗಳಲ್ಲಿ ಆಹಾರ, ತೈಲ, ರಸಗೊಬ್ಬರ ಸಬ್ಸಿಡಿಗಳಿಗಾಗಿ 24.85 ಕೋಟಿ ರೂ. ನೀಡಲಾಗಿದ್ದು, ಬಂಡವಾಳ ನಿರ್ವಹಣೆಗಾಗಿ 26.3 ಲಕ್ಷ ಕೋಟಿ ಬಳಕೆ ಮಾಡಿದೆ.

ಇನ್ನು ಕಳೆದ 8 ವರ್ಷಗಳಲ್ಲಿ ಸುಮಾರು 100 ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ತೈಲ ತೆರಿಗೆ ಮೂಲಕ ಸಂಗ್ರಹಿಸಿದೆ. ಆದರೆ ಬಹುಪಾಲು ಹಣವನ್ನು ಅಭಿವೃದ್ದಿ ಯೋಜನೆಗಳಿಗೆ ವಿನಿಯೋಗಿಸಿದೆ ಮತ್ತು ಸಂಪತ್ತು ಸೃಷ್ಟಿಸಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Tags: bjpIndianirmalasitharamanpoliticalpolitics

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.