Mysore: ಸಿಎಂ ಸಿದ್ದರಾಮಯ್ಯ @Siddaramaiah ಅವರನ್ನು ‘ಸೋಮಾರಿ ಸಿದ್ದ’ ಎಂದು (FIR on Pratap Simha) ಏಕವಚನದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದ
ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ #pratapsimha ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಪ್ರತಾಪ್ ಸಿಂಹ ಅವರು ಹುಣಸೂರಿನಲ್ಲಿ (Hunasuru) ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸುಳ್ಳು ಆರೋಪಗಳನ್ನು ಮಾಡಿದ್ದು ಕೋಮು
ಪ್ರಚೋದನಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ (Vijay Kumar) ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಅದರನ್ವಯ ಪೊಲೀಸರು ಭಾರತೀಯ ದಂಡ ಸಂಹಿತೆ 504 (ಉದ್ದೇಶಪೂರ್ವಕವಾಗಿ ನಿಂದಿಸಿ ಶಾಂತಿಭಂಗ ಉಂಟುಮಾಡುವುದು), 153(ಕೋಮುಗಳ ನಡುವೆ ದ್ವೇಷ ಹುಟ್ಟಿಸುವುದು) ಸೆಕ್ಷನ್ ಗಳ
ಅನ್ವಯ ಎಫ್ಐಆರ್ (FIR) ದಾಖಲಿಸಿದ್ದಾರೆ. ಪ್ರತಾಪ್ ಸಿಂಹ ಅವರು ಕೋಮುಗಲಭೆ ನಡೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ (Congress) ಕಾರ್ಯಕರ್ತರು
ಮಂಗಳವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಲ್ಲೇ (FIR on Pratap Simha) ಪ್ರಕರಣ ದಾಖಲಾಗಿದೆ.
ಎಫ್ಐಆರ್ (FIR) ನಲ್ಲಿ ಇರುವುದೇನು?
ಡಿ.26ರಂದು ಮೈಸೂರು (Mysore) ಜಿಲೆಯ ಹುಣಸೂರು ಪಟ್ಟಣದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲಿ ಪಾಲ್ಗೊಂಡಿದ್ದ ಮೈಸೂರು, ಕೊಡುಗು ಲೋಕಸಭೆ ಕ್ಷೇತ್ರದ ಸಂಸದರಾದ ಪ್ರತಾಪ್
ಸಿಂಹ ಅವರು ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ (Siddaramaiah) ವಿರುದ್ಧ “ಸೋಮಾರಿ ಸಿದ್ದ” ಎಂದು ಏಕವಚನದಲ್ಲಿ ಮಾತನಾಡಿದ್ದಾರೆ.
ಸಿದ್ದರಾಮಯ್ಯರವರು ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಆರೋಪವನ್ನು ಮಾಡಿ, ಹಿಂದೂ ಮತ್ತು ಮುಸ್ಲಿಂಗಳ ನಡುವೆ ಕೋಮು ಗಲಭೆ ಉಂಟು ಮಾಡಲು
ನಿರಂತರವಾದ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಹಿಂದೂ ಮತ್ತು ಮುಸ್ಲಿಂಮರ (Muslim) ನಡುವೆ ದಳ್ಳುರಿ ಸೃಷ್ಟಿಸುವ ಹೇಳಿಕೆ ನೀಡಿ ಸಾರ್ವಜನಿಕವಾಗಿ ಆಶಾಂತಿಯನ್ನು ಉಂಟು ಮಾಡುವ
ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯ ಕುಮಾರ್ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರತಾಪ್ ಸಿಂಹ ಹೇಳಿಕೆ:
ಮಂಗಳವಾರ ಹುಣಸೂರಿನಲ್ಲಿ ಮಾತನಾಡುವ ವೇಳೆ ಪ್ರತಾಪ್ ಸಿಂಹ ಅವರು ಸಂಸತ್ ಘಟನೆ ನಂತರ ಕಾಂಗ್ರೆಸ್ ನನ್ನ ಮೇಲೆ ವೈಯಕ್ತಿಕ ದಾಳಿ ಜಾಸ್ತಿ ಮಾಡಿದೆ. ಕಾಂಗ್ರೆಸ್ ಕಾರ್ಯಕರ್ತನಿಂದ
ಹಿಡಿದು ಸಿಎಂ ಅವರ ಪುತ್ರನವರೆಗೂ ಎಲ್ಲರೂ ನನ್ನ ಟಾರ್ಗೆಟ್ (Target) ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಸಂಸತ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸಿಗರು ನನ್ನನ್ನು ಭಯೋತ್ಪಾದಕ
ಎಂದು ಬಿಂಬಿಸುವ ಪ್ರಯತ್ನ ನಡೆಸಿದರು.
ಮುಸ್ಲಿಮರೆಲ್ಲ ಭಯೋತ್ಪಾದಕರು ಅನ್ನುವ ಅರ್ಥ ಕೊಡುವ ರೀತಿಯಲ್ಲಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟ ಪೋಸ್ಟರ್ (Poster) ಹಾಕಿದ್ದರು. ಸಿದ್ದರಾಮಯ್ಯನವರೇ ನಿಮಗೆ
ನಿಜವಾಗಿಯೂ ತಾಕತ್ತು, ಧಮ್ ಇದ್ದರೆ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ ಎಂದು ಸವಾಲು ಹಾಕಿದ್ದರು.
ನನ್ನ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟೊಂದು ದ್ವೇಷ? ಬಡವರ ಮಕ್ಕಳು ಯಾವತ್ತೂ ರಾಜಕಾರಣ ಮಾಡಬಾರದಾ? ಈ 9 ವರ್ಷದಲ್ಲಿ ನಾನು ಏನು ಕೆಲಸ ಮಾಡಿದ್ದೇನೆ, ಸಿದ್ದರಾಮಯ್ಯ
ತಮ್ಮ 40 ವರ್ಷದ ರಾಜಕಾರಣದಲ್ಲಿ ಏನು ಮಾಡಿದ್ದಾರೆ ಎಂದು ಹೇಳಲಿ. ನೀನು ಗೌಡ (Gowda), ನೀನು ಕುರುಬ, ನೀನು ಲಿಂಗಾಯತ ಎಂದೆಲ್ಲಾ ಅವರ ಹಾಗೆ ಜಾತಿ ರಾಜಕಾರಣ ನಾನು
ಮಾಡಿಲ್ಲ. ನಾನು ಮಾಡಿರುವುದು ಅಭಿವೃದ್ಧಿ ರಾಜಕಾರಣ ಮಾತ್ರ. ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತು ನಾನು ಜಾತಿ ರಾಜಕಾರಣ ಮಾಡಿಲ್ಲ ಎಂದು ಹೇಳಿದ್ದರು.
ಇದನ್ನು ನೋಡಿ: ಪ್ರೆಸ್ಕ್ಲಬ್ನ ‘ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಿ.ಕೆ.ಶಿವಕುಮಾರ್ ಆಯ್ಕೆ: 29 ಪತ್ರಕರ್ತರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ
- ಭವ್ಯಶ್ರೀ ಆರ್ ಜೆ