Bengaluru: ಇತ್ತೀಚೆಗಷ್ಟೇ ಸಂಭವಿಸಿದ ಅತ್ತಿಬೆಲೆ (Firecrackers Ban in Kar) ಪಟಾಕಿ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದು, ಈ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ
ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ. ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ
ಪಟಾಕಿ ಬ್ಯಾನ್ ಮಾಡಲು ಚಿಂತನೆ (Firecrackers Ban in Kar) ಮಾಡಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಹೆಚ್ಚು ಜನ ವಾಸಿಸುತ್ತಿರುವ ಹಿನ್ನೆಲೆ, ಸಾಧಕ ಬಾಧಕ ಗಮನಿಸಿ ಕನಿಷ್ಠ, ನಗರದಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಇತ್ತೀಚೆಗೆ ಪಟಾಕಿ
ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ (Delhi) ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್ಗೆ ಚಿಂತನೆ ಮಾಡಲಾಗುವುದು ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಿಳಿಸಿದರು.
2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಪಟಾಕಿ ಮಳಿಗೆ ಮಾಲೀಕ ಫೇಕ್ ಲೈಸೆನ್ಸ್ (Fake License) ಸೃಷ್ಟಿ ಮಾಡಲಾಗಿದ್ದು, ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ
ಪರವಾನಗಿ ನೀಡಲಾಗಿದೆ. ಆದರೆ 50 ಟನ್ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.
ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ (Fire) ಮತ್ತು ಟ್ರಾನ್ಸ್ಪೋರ್ಟ್ (Transport) ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಗಡಿಯಲ್ಲಿ
ಆರ್.ಟಿ.ಒ (RTO) ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಂಡಿರಲಿಲ್ಲ ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಓದಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ವಿಶ್ವಕಪ್ ಪಂದ್ಯ: ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್
- ಭವ್ಯಶ್ರೀ ಆರ್.ಜೆ