ಬದನವಾಳು ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮೆಳೇಕೋಟೆ ಟೂರಿಂಗ್ ಟಾಕೀಸ್ ಹಾಗು ಸಿನಿಮಾ ಮಾರ್ಕೆಟ್ ಬ್ಯಾನರ್ ನ ಅಡಿಯಲ್ಲಿ ನೈಜ ಘಟನೆ ಆಧಾರಿತ ಚಿತ್ರವೊಂದು ತಯಾರಾಗಿದೆ.

‘ಬದನವಾಳು’ ಎನ್ನುವ ಶೀರ್ಷಿಕೆಯೊಂದಿಗೆ ಹಳೆ ಮೈಸೂರು ಪ್ರಾಂತ್ಯಕ್ಕೆ ಅಂಟಿಕೊಂಡಿರುವ ‘ಬದನವಾಳು’ ಗ್ರಾಮದ ಒಟ್ಟು ವ್ಯವಸ್ಥೆಯನ್ನು ಯಥಾವತ್ತಾಗಿ ಸಿನಿರಸಿಕರಿಗೆ ನೀಡುವ ಜವಾಬ್ದಾರಿಯನ್ನು ನಿರ್ದೇಶಕರಾಗಿ ಉದಯ್ ಪ್ರಸನ್ನ ಅವರು ನಿರ್ವಹಿಸಿದ್ದಾರೆ ಎನ್ನಲಾಗಿದೆ. ನಿರ್ಮಾಪಕರಾಗಿ ಪಾರ್ವತಿ ಚಂದ್ರಶೇಖರ್, ಲೀಲಾವತಿ ಸುರೇಶ ಕುಮಾರ್ ಮತ್ತು ಪ್ರೇಮ ಚಂದ್ರಯ್ಯ (ನಾಗಸಂದ್ರ) ನಿರ್ವಹಿಸಿದ್ದಾರೆ. ಮುಖ್ಯ ತಾರಾಗಣದಲ್ಲಿ ಉದಯೋನ್ಮುಖ ನಟರಾದ ರಾಜ್ ಮಂಜು ನಾಯಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಚಿತ್ರದ ನಾಯಕಿಯಾಗಿ ಬಿಂದುಶ್ರೀ ಮಿಂಚಲಿದ್ದಾರೆ.

ಮೂಲತಃ ಈ ಚಿತ್ರಕತೆ ಸಾಮಾಜಿಕ ವ್ಯವಸ್ಥೆಯ ದಾರಿದ್ರ್ಯವನ್ನು ಬಿಂಬಿಸುವಲ್ಲಿ ತಯಾರಿ ನಡೆಯುತ್ತಿದೆ. ಜಾತಿ ವ್ಯವಸ್ಥೆಯಲ್ಲಿ ಮೇಲು-ಕೀಳು,ಅಸ್ಪೃಶ್ಯತೆಯಲ್ಲಿ ಅರಳುವ ಪ್ರೀತಿ, ಮಾನಸಿಕ ದಾರಿದ್ರ್ಯಕ್ಕೆ ಅಂಟಿಕೊಂಡಿರುವ ಪ್ರೇಮ ವೈಫಲ್ಯ,ನೀಚಾ ರಾಜಕಾರಣಿಗಳು ಯಾವ ರೀತಿ ಯುವ ಪಿಳಿಗೆಯನ್ನು ಅವರ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು. ಹಾಗು ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೋಸ, ಹೀಗೆ ಹಲವಾರು ಪ್ರಮುಖ ಅಂಶಗಳನ್ನು ವಾಸ್ತವವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಮೇಲ್ಕಂಡ ಅಂಶಗಳನ್ನು ಯಾವ ರೀತಿ ತೆರೆ ಮೇಲೆ ಬಿಂಬಿತವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Exit mobile version