Bengaluru: ಮಳೆಗಾಲದ ಆರಂಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಡೆಂಗ್ಯೂ (Dengue) ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗಲಿ ಎಂದು ಡೆಂಗ್ಯೂ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಇಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಡೆಂಗ್ಯೂ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದ್ದಾರೆ.
![Dengue](https://sp-ao.shortpixel.ai/client/to_webp,q_glossy,ret_img,w_1000,h_600/https://vijayatimes.com/wp-content/uploads/2024/07/Dengue-Fever-3.webp)
ಅಲ್ಲದೆ ಇದೇ ಸುಸಂದರ್ಭ ಎಂದು ಖಾಸಗಿ ಆಸ್ಪತ್ರೆಗಳು ರೋಗಿಗಳ ಸುಲಿಗೆ ಮಾಡತೊಡಗದಂತೆ ಕಡ್ಡಾಯವಾಗಿ ಡೆಂಗ್ಯೂ ಪಾಸಿಟಿವ್ ಪ್ರಕರಣ (Positive Case)ಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು . ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು .ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ.
ಸಾಧ್ಯವಾದಷ್ಟು ಮುಂಚಿತವಾಗಿ ಡೆಂಗ್ಯೂ ಪಾಸಿಟಿವ್ ಪ್ರಕರಣಗಳನ್ನ ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ (BBMP) ಅಧಿಕಾರಿಗಳು ಹೆಚ್ಚು ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_616,h_401/https://vijayatimes.com/wp-content/uploads/2024/02/Dinesh-Gundurao11aug2023.webp)
ಈಗಾಗಲೇ ರಾಜ್ಯದಲ್ಲಿ ಜನವರಿ ತಿಂಗಳಿನಿಂದ ಜೂನ್ ಅಂತ್ಯದ ವರೆಗೆ ಒಟ್ಟೂ 6187 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಜನರು ಸಾವಿಗೀಡಾಗಿದ್ದಾರೆ. ಡೆಂಗ್ಯೂ ಮರಣ ಪ್ರಮಾಣ ಶೇ 0.09 ರಷ್ಟಿದೆ. ಹೇಗಿದ್ದರೂ ಕೂಡ ಸಾವುಗಳನ್ನ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ.
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ (Bangalore, Chikkamagalauru, Mysore, Haveri, Chitradurga, Shimoga, Dakshina Kannada) ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ.
ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.ಪ್ರತಿ ಶುಕ್ರವಾರ ಡೆಂಘೀ ನಿಯಂತ್ರಣ ಅಭಿಯಾನ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ (Health Department) ಎಲ್ಲ ಅಧಿಕಾರಿಗಳು ಪ್ರತಿ ಶುಕ್ರವಾರ ಫೀಲ್ಡ್ ನಲ್ಲಿರಬೇಕು. ಲಾರ್ವಾ ನಾಶದ ಕುರಿತು ತೆಗೆದುಕೊಳ್ಳುತ್ತಿರುವ ಕ್ರಮಗಳ ಮೇಲ್ವಿಚಾರಣೆ ನಡೆಸುವಂತೆ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.