ರಾಜ್ಯದಲ್ಲಿಡೆ ಪ್ರವಾಹ ಭೀತಿ ಹಿನ್ನೆಲೆ: ವಿಡಿಯೋ ಸಂವಾದ ಮೂಲಕ ಪರಿಸ್ಥಿತಿ ಅವಲೋಕಿಸಿದ ಯಡಿಯೂರಪ್ಪ

ಬೆಂಗಳೂರು, ಜು. 24: ರಾಜ್ಯಾಧ್ಯಂತ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ವಿಡಿಯೋ ಸಂವಾದ ನಡೆಸಿದರು.

ಅತಿವೃಷ್ಟಿ ಪೀಡಿತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರುಗಳು ಉಸ್ತುವಾರಿ ಜಿಲ್ಲೆಯಲ್ಲಿಯೇ ಉಳಿದು ಜನರ ಸಂಕಷ್ಟಗಳಿಗೆ ನೆರವಾಗಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕಬಾರದು ಹಾಗೂ ಕೇಂದ್ರ ಸ್ಥಳವನ್ನು ಬಿಟ್ಟು ಹೋಗಬಾರದು. ಜನ ಸಮಸ್ಯೆಗಳಿಗೆ ದಿನದ 24 ಗಂಟೆ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರವಾಹದಿಂದಾಗಿ ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಖುದ್ದಾಗಿ ಪರಿಸ್ಥಿತಿ ಅವಲೋಕಿಸಲು ಭಾನುವಾರ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯ  ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Exit mobile version