400ಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ 9 ಜನರ ವಿರುದ್ಧ ಪ್ರಕರಣ ದಾಖಲು!

Uttar Pradesh : ಉತ್ತರ ಪ್ರದೇಶದ(Uttar Pradesh) ಮೀರತ್‌ನಲ್ಲಿ(Meerat) 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವಂತೆ(forced religious conversions) ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣದ ಬಗ್ಗೆ ಸಂತ್ರಸ್ತರು ಹಿರಿಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ, ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು(forced religious conversions) ಆಮಿಷ ಒಡ್ಡಲಾಗಿದೆ ಎಂದು ದೂರು ನೀಡಿದ್ದಾರೆ.

ಉತ್ತರಪ್ರದೇಶದ, ಮೀರತ್ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಲೀಸ್ ದೂರಿನಲ್ಲಿ, ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತರು ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಅಕ್ರಮವಾಗಿ ಇತರ ಧರ್ಮಗಳಿಗೆ ಮತಾಂತರಗೊಳ್ಳಲು ಜನರನ್ನು ಒತ್ತಾಯಿಸಿದ ಆರೋಪಿಗಳು ಕೋವಿಡ್ -19 ಪ್ರೇರಿತ ಸಾಂಕ್ರಾಮಿಕ ಸಮಯದಲ್ಲಿ ದೂರು ನೀಡಿದ ಸಂತ್ರಸ್ತರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : https://vijayatimes.com/it-is-not-a-problem/

ಶುಕ್ರವಾರ ಸಂತ್ರಸ್ತರು ಬಿಜೆಪಿ ನಾಯಕನೊಂದಿಗೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿ, ಆರೋಪಿಗಳು ಧಾರ್ಮಿಕ ಮತಾಂತರಕ್ಕಾಗಿ ಹಣ ಮತ್ತು ಆಹಾರದ ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ.

ಈಗ ಈ ಜನರು ಹಿಂದೂ ದೇವತೆಗಳ ವಿಗ್ರಹಗಳು, ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ತೆಗೆದು ಕ್ರಿಶ್ಚಿಯನ್ ಧರ್ಮ ಸ್ವೀಕರಿಸುವಂತೆ ಗ್ರಾಮಸ್ಥರನ್ನು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ದೂರುದಾರರು ಪೊಲೀಸರಿಗೆ, “ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಗುತ್ತಿದೆ ಮತ್ತು ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸುವಂತೆ ಕೇಳಲಾಗಿದೆ.

ದೀಪಾವಳಿಯ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದರು.

ನೀವು ನಿಮ್ಮ ಧರ್ಮವನ್ನು ಪರಿವರ್ತಿಸಿ ಎಂದು ಯಾಕೆ ನಮಗೆ ಹಿಂಸೆ ಕೊಡುತ್ತಿದ್ದೀರಾ? ಎಂದು ವಿರೋಧಿಸಿ, ಪ್ರಶ್ನಿಸಿದ್ದಕ್ಕೆ ಅವರು ನಮಗೆ ಜೀವ ಬೆದರಿಕೆ ಹಾಕಿದರು.

ಎಫ್‌ಐಆರ್‌ನಲ್ಲಿ(FIR) ದಾಖಲಾಗಿರುವ ಆರೋಪಿಗಳ ಹೆಸರು, ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ.

https://www.facebook.com/Vijayatimeskannada/videos/1575287249571694/

ಎಸ್ಪಿ ಪಿಯೂಷ್ ಸಿಂಗ್ ಮಾತನಾಡಿ, ‘ಶುಕ್ರವಾರ ಕೆಲವರು ನಮ್ಮ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದ್ದು, ಇತರೆ ಧರ್ಮದವರು ಮಾಳಿನ್ ಗ್ರಾಮದ ಜನರ ಧರ್ಮವನ್ನು ಬಲವಂತವಾಗಿ ಮತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನೋಂದಣಿ ಮಾಡಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಆರೋಪಿಗಳ ವಿರುದ್ಧ ಎಫ್‌ಐಆರ್, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸೂಚನೆ ನೀಡಿದ್ದಾರೆ.

Source : India Today

Exit mobile version