ಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಮಾ. 02:. ಸಿಡಿ ಇದ್ದರೆ ನಾಳೆಯೇ ಬಿಡುಗಡೆ ಮಾಡಲಿ. ಚನ್ನಪಟ್ಟಣ ಇಲ್ಲಾಂದ್ರೆ ಎಲ್ಲಾದರೂ ಬರಲಿ. ರಾಜಕಾರಣ ಮಾಡೋದು ನನಗೆ ಗೊತ್ತಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಚಿವ ಸಿಪಿ ಯೋಗೇಶ್ವರ್ ಗೆ ಸವಾಲ್ ಹಾಕಿದ್ದಾರೆ. ಸಚಿವ ಸಿ.ಪಿ‌.ಯೋಗೇಶ್ವರ್ ಲೆವೆಲ್‌ಗೆ ನಾನು ಇಳಿಯಲ್ಲ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೀಶ್ವರ ಹೇಳಿರುವಂತ ಆ ಸವಾಲ್ ನ್ನ ನನ್ನ ಕಾರ್ಯಕರ್ತರೇ ಸ್ವೀಕಾರ ಮಾಡ್ತಾರೆ. ನಾನು ಚನ್ನಪಟ್ಟಣದಲ್ಲಿ ಅರ್ಜಿ ಹಾಕಿ ಬಂದಿದ್ದೇನೆ ನಾನು ಗೆಲ್ಲಲಿಲ್ಲವೇ, ಹಾಗಾಗಿ ಈ ರೀತಿಯ ಹೇಳಿಕೆಗಳು ಬೇಡ ಎಂಬುದಾಗಿ ಹೇಳುವ ಮೂಲಕ, ಸಚಿವ ಸಿ.ಪಿ‌.ಯೋಗೇಶ್ವರ್ ಗೆ ಹೆಚ್ಡಿಕುಮಾರಸ್ವಾಮಿ  ಟಾಂಗ್ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವ ಬಿ‌.ಸಿ.ಪಾಟೀಲ್ ಮನೆಗೆ ಕರೆಸಿ ವ್ಯಾಕ್ಸಿನ್ ತೆಗೆದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದಲ್ಲಿ ಯಾರು ಏನ್ ಬೇಕಾದರೂ ಮಾಡಬಹುದು ಎಂದರು.

Exit mobile version