ಆನೆ ಹೋಗುತ್ತೇ, ನಾಯಿ ಬೊಗಳುತ್ತೇ: ಆಪ್ತ ಸ್ನೇಹಿತನ ಬೆನ್ನಿಗೆ ನಿಂತ ಮಾಜಿ ಸಚಿವ ಮಹದೇವಪ್ಪ

ಮೈಸೂರು, ಫೆ. 27: ಆನೆ ಹೋಗುತ್ತೆ ನಾಯಿ ಬೊಗಳುತ್ತೆ.ಅದರಿಂದ ಏನು ಆಗೋಲ್ಲ. ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ ವಿಚಾರಕ್ಕೆ ಹೆಚ್.ಸಿ.ಮಹದೇವಪ್ಪ ಖಾರವಾದ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾನ್ ನಾಯಕರ ವಿರುದ್ದ ದೂಷಣೆ ಮಾಡಿದ್ರು, ಘೋಷಣೆಯನ್ನೂ ಕೂಗಿದ್ರು, ಆದರೆ ಅವರ ಹೆಸರುಗಳೇನು ಚರಿತ್ರೆಯಲ್ಲಿ ಹಾಳಾಯ್ತಾ? ಹಾಗೆಯೇ ಸಿದ್ದರಾಮಯ್ಯ ವಿರುದ್ಧ ಕೂಗಿದ ಘೋಷಣೆಗೆ ಮಹತ್ವ ಕೊಡಬೇಕಿಲ್ಲ.

ತನ್ವೀರ್ ವಿರುದ್ದ ಕೂಗಿಗೆ ಕೆಪಿಸಿಸಿ ಅಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ. ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ್ದು ದುರಾದೃಷ್ಟಕರ ವಿಚಾರ . ಸಿದ್ದರಾಮಯ್ಯ ಒಬ್ಬ ಶ್ರೇಷ್ಠ ನಾಯಕ. ಬಡವರ ಬಗ್ಗೆ ಅಪಾರ ಕಾಳಜಿ ಇದೆ. ಜನರ ನಾಡಿಮಿಡಿತಗಳನ್ನ ಸಿದ್ದರಾಮಯ್ಯ ಚೆನ್ನಾಗಿ ಅರಿತಿದ್ದಾರೆ. ನಾಡಿನ ಅಗ್ರಗಣ್ಯ ನಾಯಕರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು.

ಪಕ್ಷದಲ್ಲಿ ಕೆಲ ಅಸಮಾಧಾನ ಭುಗಿಲೇಳೋದು ಸರ್ವೇ ಸಾಮಾನ್ಯ, ಕಾರ್ಯಕರ್ತರು ಇದನ್ನ ಅರ್ಥ ಮಾಡಿಕೊಳ್ಳಬೇಕು ಅಂತ ಹೇಳಿದ್ರು .ಅವರನ್ನು ಅರ್ಥ ಮಾಡಿಕೊಳ್ಳದೆ ಕೆಲವರು ಘೋಷಣೆ ಕೂಗಿದ್ದು ಸರಿಯಲ್ಲ. ಈ ರೀತಿ ಬೆಳವಣಿಗೆ ಸ್ಥಳೀಯ ಕಾಂಗ್ರೆಸ್ ಸಂಘಟನೆಗೆ ಆರೋಗ್ಯಕರವಲ್ಲ.

ಸಿದ್ದರಾಮಯ್ಯ ಅವ್ರ ವರ್ಚಸ್ಸಿಗೆ ಯಾರೂ ಕೂಡ ಧಕ್ಕೆ ತರೋದಕ್ಕೆ ಆಗೋದಿಲ್ಲ. ಕೆಪಿಸಿಸಿ ಅಧ್ಯಕ್ಷರು ಎಲ್ಲ ಘಟನೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ತನ್ವೀರ್ ಹಾಗೂ ಕಾರ್ಯಕರ್ತರ ಅಂತ ಅವರೇ ಕ್ರಮಕೈಗೊಳ್ತಾರೆ ಅಂತ ಹೇಳಿದ್ರು.

Exit mobile version